ಕ್ರೀಡೆ

ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

 

andolanait

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

2 hours ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago