ಹ್ಯಾಂಗ್ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.
ಬುಧವಾರ ನಡೆದ ಏಷ್ಯನ್ ಗೇಮ್ಸ್ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್ ಜೆನ್ನಾ 87.54 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.
ಇತ್ತೀಚೆಗಷ್ಟೇ ನಡೆದ ವರ್ಲ್ಡ್ ಚಾಂಪಿಯನ್ಶಿಪ್ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.
ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…