ಕ್ರೀಡೆ

ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

 

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

6 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

6 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

6 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

6 hours ago