ಕ್ರೀಡೆ

ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago