ಕ್ರೀಡೆ

ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

 

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago