ಕ್ರೀಡೆ

ಏಷ್ಯನ್‌ ಗೇಮ್ಸ್:‌ ಸೇಲಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದ ನೇಹಾ ಠಾಕೂರ್

ನಿಂಗೊ (ಚೀನಾ): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸೇಲಿಂಗ್‌ನಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಜಯಿಸಿದ್ದಾರೆ. ಮಹಿಳೆಯರ ಡಿಂಘಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.

ಭೋಪಾಲ್‌ನ ನ್ಯಾಷನಲ್ ಸೇಲಿಂಗ್ ಸ್ಕೂಲ್‌ನ ಉದಯೋನ್ಮುಖ ಸೇಲಿಂಗ್ ಪಟು ನೇಹಾ ಒಟ್ಟು 32 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಅವರ ನೆಟ್ ಸ್ಕೋರ್ 27 ಆಗಿದ್ದರಿಂದ ಬೆಳ್ಳಿಗೆ ತೃಪ್ತಿ ಪಡಬೇಕಾಯಿತು. 16 ನೆಟ್ ಸ್ಕೋರ್ ಇದ್ದ ಥಾಯ್ಲೆಂಡ್‌ನ ನೊಪಾಸ್ಪೋರ್ನ್ ಖುನ್‌ಬೂಂಜಾನ್ ಚಿನ್ನ ಗೆದ್ದರು.

28 ನೆಟ್ ಸ್ಕೋರ್ ಇದ್ದ ಸಿಂಗಪುರದ ಕೀರಾ ಮೇರಿ ಕಾರ್ಲೈಲ್ ನೆಟ್ರೋರ್ ಕಂಚಿನ ಪದಕ ಗೆದ್ದರು.

ಸೇಲಿಂಗ್‌ನಲ್ಲಿ ನೆಟ್ ಸ್ಕೋರ್ ಅನ್ನು ನಿರ್ಧರಿಸಲು ಎಲ್ಲಾ ರೇಸ್‌ಗಳಿಂದ ಸ್ಪರ್ಧಿಯ ಕೆಟ್ಟ ಸ್ಕೋರ್ ಅನ್ನು ಒಟ್ಟು ಅಂಕಗಳಿಂದ ಕಳೆಯಲಾಗುತ್ತದೆ. ಕಡಿಮೆ ನೆಟ್ ಸ್ಕೋರ್ ಹೊಂದಿರುವವರನ್ನು ವಿಜೇತ ಎಂದು ನಿರ್ಣಯಿಸಲಾಗುತ್ತದೆ.

ಮಹಿಳೆಯರ ಡಿಂಘಿ ILCA-4 ವಿಭಾಗವು 11 ರೇಸ್‌ಗಳನ್ನು ಒಳಗೊಂಡಿದೆ. ನೇಹಾ ಒಟ್ಟು 32 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಐದನೇ ರೇಸ್‌ನಲ್ಲಿ ಕೇವಲ 5 ಅಂಕ ಗಳಿಸುವ ಮೂಲಕ ಕೆಟ್ಟ ಪ್ರದರ್ಶನ ನೀಡಿದ ನೇಹಾ, 27 ನೆಟ್ ಸ್ಕೋರ್‌ನೊಂದಿಗೆ ಆಟ ಮುಗಿಸಿದರು.

andolanait

Recent Posts

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

5 mins ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

10 mins ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

2 hours ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

2 hours ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

2 hours ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

3 hours ago