ಕ್ರೀಡೆ

ಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ.

ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ ನಲ್ಲಿ ಲೊವ್ಲಿನಾ ಬೊರ್ಗೊಹೈನ್‌ ಅವರು, ಹಾಲಿ ವಿಶ್ವ ಚಾಂಪಿಯನ್ ಮತ್ತು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಲಿ ಕಿಯಾನ್ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ಬೆಳ್ಳಿಗೆ ತೃಪ್ತಿಪಟ್ಟರು.

ಇನ್ನು ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 57 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಪರ್ವೀನ್ ಹೂಡಾ ಅವರು ಎರಡು ಬಾರಿಯ ವಿಶ್ವ ಚಾಂಪಿಯನ್ ಚೈನೀಸ್ ತೈಪೆಯ ಲಿನ್ ಯು ಟಿಂಗ್ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ಕಂಚಿಗೆ ತೃಪ್ತಿಪಟ್ಟರು.

ಈ ಮೂಲಕ ಭಾರತದ ಬಾಕ್ಸರ್‌ಗಳು ಒಂದು ಬೆಳ್ಳಿ ಮತ್ತು ನಾಲ್ಕು ಕಂಚು ಸೇರಿದಂತೆ ಐದು ಪದಕಗಳನ್ನು ಗೆದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತ ಒಂದು ಚಿನ್ನ ಮತ್ತು ಒಂದು ಕಂಚು ಗೆದ್ದಿತ್ತು.

“ನಾನು ಅತ್ಯುತ್ತಮ ಪ್ರದರ್ಶನ ನೀಡಿದ್ದೇನೆ. ಆದರೂ ಚಿನ್ನವನ್ನು ತರಲು ಸಾಧ್ಯವಾಗಲಿಲ್ಲ. ನನ್ನ ಆಟದಿಂದ ನನಗೆ ಸಂತೋಷವಾಗಿದೆ. ನಾನು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲಲು ಪ್ರಯತ್ನಿಸುತ್ತೇನೆ” ಎಂದು ಬೋರ್ಗೊಹೈನ್ ಅವರು ಪಂದ್ಯದ ನಂತರ ಹೇಳಿದ್ದಾರೆ.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

38 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

1 hour ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago