ಕ್ರೀಡೆ

ಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ.

ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ ನಲ್ಲಿ ಲೊವ್ಲಿನಾ ಬೊರ್ಗೊಹೈನ್‌ ಅವರು, ಹಾಲಿ ವಿಶ್ವ ಚಾಂಪಿಯನ್ ಮತ್ತು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಲಿ ಕಿಯಾನ್ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ಬೆಳ್ಳಿಗೆ ತೃಪ್ತಿಪಟ್ಟರು.

ಇನ್ನು ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 57 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಪರ್ವೀನ್ ಹೂಡಾ ಅವರು ಎರಡು ಬಾರಿಯ ವಿಶ್ವ ಚಾಂಪಿಯನ್ ಚೈನೀಸ್ ತೈಪೆಯ ಲಿನ್ ಯು ಟಿಂಗ್ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ಕಂಚಿಗೆ ತೃಪ್ತಿಪಟ್ಟರು.

ಈ ಮೂಲಕ ಭಾರತದ ಬಾಕ್ಸರ್‌ಗಳು ಒಂದು ಬೆಳ್ಳಿ ಮತ್ತು ನಾಲ್ಕು ಕಂಚು ಸೇರಿದಂತೆ ಐದು ಪದಕಗಳನ್ನು ಗೆದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತ ಒಂದು ಚಿನ್ನ ಮತ್ತು ಒಂದು ಕಂಚು ಗೆದ್ದಿತ್ತು.

“ನಾನು ಅತ್ಯುತ್ತಮ ಪ್ರದರ್ಶನ ನೀಡಿದ್ದೇನೆ. ಆದರೂ ಚಿನ್ನವನ್ನು ತರಲು ಸಾಧ್ಯವಾಗಲಿಲ್ಲ. ನನ್ನ ಆಟದಿಂದ ನನಗೆ ಸಂತೋಷವಾಗಿದೆ. ನಾನು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲಲು ಪ್ರಯತ್ನಿಸುತ್ತೇನೆ” ಎಂದು ಬೋರ್ಗೊಹೈನ್ ಅವರು ಪಂದ್ಯದ ನಂತರ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago