ಕ್ರೀಡೆ

ಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ.

ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ ನಲ್ಲಿ ಲೊವ್ಲಿನಾ ಬೊರ್ಗೊಹೈನ್‌ ಅವರು, ಹಾಲಿ ವಿಶ್ವ ಚಾಂಪಿಯನ್ ಮತ್ತು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಲಿ ಕಿಯಾನ್ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ಬೆಳ್ಳಿಗೆ ತೃಪ್ತಿಪಟ್ಟರು.

ಇನ್ನು ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 57 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಪರ್ವೀನ್ ಹೂಡಾ ಅವರು ಎರಡು ಬಾರಿಯ ವಿಶ್ವ ಚಾಂಪಿಯನ್ ಚೈನೀಸ್ ತೈಪೆಯ ಲಿನ್ ಯು ಟಿಂಗ್ ವಿರುದ್ಧ ಸೋಲು ಅನುಭವಿಸುವುದರೊಂದಿಗೆ ಕಂಚಿಗೆ ತೃಪ್ತಿಪಟ್ಟರು.

ಈ ಮೂಲಕ ಭಾರತದ ಬಾಕ್ಸರ್‌ಗಳು ಒಂದು ಬೆಳ್ಳಿ ಮತ್ತು ನಾಲ್ಕು ಕಂಚು ಸೇರಿದಂತೆ ಐದು ಪದಕಗಳನ್ನು ಗೆದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತ ಒಂದು ಚಿನ್ನ ಮತ್ತು ಒಂದು ಕಂಚು ಗೆದ್ದಿತ್ತು.

“ನಾನು ಅತ್ಯುತ್ತಮ ಪ್ರದರ್ಶನ ನೀಡಿದ್ದೇನೆ. ಆದರೂ ಚಿನ್ನವನ್ನು ತರಲು ಸಾಧ್ಯವಾಗಲಿಲ್ಲ. ನನ್ನ ಆಟದಿಂದ ನನಗೆ ಸಂತೋಷವಾಗಿದೆ. ನಾನು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲಲು ಪ್ರಯತ್ನಿಸುತ್ತೇನೆ” ಎಂದು ಬೋರ್ಗೊಹೈನ್ ಅವರು ಪಂದ್ಯದ ನಂತರ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago