ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ.
ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್ನಲ್ಲಿ ನೇಪಾಳ ತಂಡವನ್ನು 23 ರನ್ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ ಫೈನಲ್ಗೆ ಪ್ರವೇಶಿಸಿದೆ.
ಟೀಂ ಇಂಡಿಯಾ ನೀಡಿದ್ದ 203 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ನೇಪಾಳ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ವೇಗಿ ಅವೇಶ್ ಖಾನ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯ್ ತಲಾ 3 ವಿಕೆಟ್ ಪಡೆದರೆ ಅರ್ಷದೀಪ್ ಸಿಂಗ್ 2 ಹಾಗೂ ರವಿಶ್ರೀನಿವಾಸನ್ ಸಾಯಿ ಕಿಶೋರ್ 1 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ದೊಡ್ಡ ಮೊತ್ತ ಬಾರಿಸಲು ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ನೆರವಾದರು. ಆರಂಭದಿಂದಲೇ ಅಬ್ಬರಿಸಿದ ಜೈಸ್ವಾನ್ 48 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದರು. ಇವರ ದಾಖಲೆಯ ಶತಕದಲ್ಲಿ 8 ಬೌಂಡರಿ ಹಾಗೂ 7 ಅಮೋಘ ಸಿಕ್ಸರ್ಗಳು ಸೇರಿದ್ದವು. ಆ ಮೂಲಕ ಯಶಸ್ವಿ ಜೈಸ್ವಾಲ್ ಏಷ್ಯ್ ಗೇಮ್ಸ್ನಲ್ಲಿ ಶತಕ ಸಿಡಿಸಿದ ಮೊದಲ ಕ್ರಿಕೆಟರ್ ಎಂಬ ದಾಖಲೆ ಬರೆದಿದರು.
ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ನಿರಾಸೆ ಮೂಡಿಸಿದರು. ಗಾಯಕ್ವಾಡ್ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಸೇರಿ 25 ರನ್ ಗಳಿಸಿ ದೀಪೇಂದ್ರ ಸಿಂಗ್ ಬೌಲಿಂಗ್ನಲ್ಲಿ ರೋಹಿತ್ ಪೌಡೆಲ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಬಂದ ತಿಲಕ್ ವರ್ಮಾ ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಹೈದರಾಬಾದ್ನ ತಿಲಕ್ 10 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿ ಸೋಪಾಲ್ ಕಾಮಿ ಬೌಲಿಂಗ್ನಲ್ಲಿ ಬೌಲ್ಡ್ ಆಗುವ ಮೂಲಕ ಬ್ಯಾಟಿಂಗ್ನಲ್ಲಿ ವಿಫಲವಾದರು.
ವಿಕೆಟ್ ಕೀಪರ್ ಜಿತೇಶ್ ಶರ್ಮಾ ಬಂದಷ್ಟೇ ವೇಗವಾಗಿ ಪೆಲಿವಿಯನ್ ಸೇರಿಕೊಂಡರು. ಶರ್ಮಾ ನಾಲ್ಕು ಎಸೆತಗಳನ್ನು ಎದುರಿಸಿ 1 ಬೌಂಡರಿ ಸೇರಿ 5 ರನ್ ಗಳಿಸಿ ಸಂದೀಪ್ ಲಮಿಚಾನೆ ಬೌಲಿಂಗ್ನಲ್ಲಿ ಔಟ್ ಆದರು.
ಕೊನೆಯಲ್ಲಿ ಶಿವಂ ದುಬೆ 19 ಎಸೆತಗಳಿಂದ 2 ಬೌಂಡರಿ 1 ಸಿಕ್ಸರ್ ಸೇರಿ 25 ರನ್ ಗಳಿಸಿದರೆ ಮತ್ತು ರಿಂಕು ಸಿಂಗ್ 15 ಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್ಗಳಿಂದ 37 ರನ್ ಬಾರಿಸಿದರು. ಆ ಮೂಲಕ ತಂಡದ ಮೊತ್ತ 200ರ ಗಡಿ ದಾಟುವಂತೆ ಮಾಡಿದರು. ನೇಪಾಳದ ಪರವಾಗಿ ದೀಪೇಂದ್ರ ಸಿಂಗ್ ಎರಡು ವಿಕೆಟ್ ಪಡೆದರೆ ಸೋಂಪಾಲ್ ಕಾಮಿ ಹಾಗೂ ಸಂದೀಪ್ ಲಮಿಚಾನೆ ತಲಾ 1 ವಿಕೆಟ್ ಗಳಿಸಿದರು. ಉತ್ತಮ ಶ್ರೇಯಾಂಕದ ಆಧಾರದ ಮೇಲೆ ಟೀಂ ಇಂಡಿಯಾ ಏಷ್ಯನ್ ಗೇಮ್ಸ್ನಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ಗೆ ಬಂದಿದೆ.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…