ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ.
ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್ನಲ್ಲಿ ನೇಪಾಳ ತಂಡವನ್ನು 23 ರನ್ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ ಫೈನಲ್ಗೆ ಪ್ರವೇಶಿಸಿದೆ.
ಟೀಂ ಇಂಡಿಯಾ ನೀಡಿದ್ದ 203 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ನೇಪಾಳ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ವೇಗಿ ಅವೇಶ್ ಖಾನ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯ್ ತಲಾ 3 ವಿಕೆಟ್ ಪಡೆದರೆ ಅರ್ಷದೀಪ್ ಸಿಂಗ್ 2 ಹಾಗೂ ರವಿಶ್ರೀನಿವಾಸನ್ ಸಾಯಿ ಕಿಶೋರ್ 1 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ದೊಡ್ಡ ಮೊತ್ತ ಬಾರಿಸಲು ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ನೆರವಾದರು. ಆರಂಭದಿಂದಲೇ ಅಬ್ಬರಿಸಿದ ಜೈಸ್ವಾನ್ 48 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದರು. ಇವರ ದಾಖಲೆಯ ಶತಕದಲ್ಲಿ 8 ಬೌಂಡರಿ ಹಾಗೂ 7 ಅಮೋಘ ಸಿಕ್ಸರ್ಗಳು ಸೇರಿದ್ದವು. ಆ ಮೂಲಕ ಯಶಸ್ವಿ ಜೈಸ್ವಾಲ್ ಏಷ್ಯ್ ಗೇಮ್ಸ್ನಲ್ಲಿ ಶತಕ ಸಿಡಿಸಿದ ಮೊದಲ ಕ್ರಿಕೆಟರ್ ಎಂಬ ದಾಖಲೆ ಬರೆದಿದರು.
ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ನಿರಾಸೆ ಮೂಡಿಸಿದರು. ಗಾಯಕ್ವಾಡ್ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಸೇರಿ 25 ರನ್ ಗಳಿಸಿ ದೀಪೇಂದ್ರ ಸಿಂಗ್ ಬೌಲಿಂಗ್ನಲ್ಲಿ ರೋಹಿತ್ ಪೌಡೆಲ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಬಂದ ತಿಲಕ್ ವರ್ಮಾ ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಹೈದರಾಬಾದ್ನ ತಿಲಕ್ 10 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿ ಸೋಪಾಲ್ ಕಾಮಿ ಬೌಲಿಂಗ್ನಲ್ಲಿ ಬೌಲ್ಡ್ ಆಗುವ ಮೂಲಕ ಬ್ಯಾಟಿಂಗ್ನಲ್ಲಿ ವಿಫಲವಾದರು.
ವಿಕೆಟ್ ಕೀಪರ್ ಜಿತೇಶ್ ಶರ್ಮಾ ಬಂದಷ್ಟೇ ವೇಗವಾಗಿ ಪೆಲಿವಿಯನ್ ಸೇರಿಕೊಂಡರು. ಶರ್ಮಾ ನಾಲ್ಕು ಎಸೆತಗಳನ್ನು ಎದುರಿಸಿ 1 ಬೌಂಡರಿ ಸೇರಿ 5 ರನ್ ಗಳಿಸಿ ಸಂದೀಪ್ ಲಮಿಚಾನೆ ಬೌಲಿಂಗ್ನಲ್ಲಿ ಔಟ್ ಆದರು.
ಕೊನೆಯಲ್ಲಿ ಶಿವಂ ದುಬೆ 19 ಎಸೆತಗಳಿಂದ 2 ಬೌಂಡರಿ 1 ಸಿಕ್ಸರ್ ಸೇರಿ 25 ರನ್ ಗಳಿಸಿದರೆ ಮತ್ತು ರಿಂಕು ಸಿಂಗ್ 15 ಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್ಗಳಿಂದ 37 ರನ್ ಬಾರಿಸಿದರು. ಆ ಮೂಲಕ ತಂಡದ ಮೊತ್ತ 200ರ ಗಡಿ ದಾಟುವಂತೆ ಮಾಡಿದರು. ನೇಪಾಳದ ಪರವಾಗಿ ದೀಪೇಂದ್ರ ಸಿಂಗ್ ಎರಡು ವಿಕೆಟ್ ಪಡೆದರೆ ಸೋಂಪಾಲ್ ಕಾಮಿ ಹಾಗೂ ಸಂದೀಪ್ ಲಮಿಚಾನೆ ತಲಾ 1 ವಿಕೆಟ್ ಗಳಿಸಿದರು. ಉತ್ತಮ ಶ್ರೇಯಾಂಕದ ಆಧಾರದ ಮೇಲೆ ಟೀಂ ಇಂಡಿಯಾ ಏಷ್ಯನ್ ಗೇಮ್ಸ್ನಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ಗೆ ಬಂದಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…