ಕ್ರೀಡೆ

ಏಷ್ಯನ್ ಗೇಮ್ಸ್ : ನೇಪಾಳ ಮಣಿಸಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟ ಟೀಂ ಇಂಡಿಯಾ

ಹ್ಯಾಂಗ್‌ಝೌ‌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್‌ ಫೈನಲ್‌ನಲ್ಲಿ ನೇಪಾಳ ತಂಡವನ್ನು 23 ರನ್‌ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

ಟೀಂ ಇಂಡಿಯಾ ನೀಡಿದ್ದ 203 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ನೇಪಾಳ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ವೇಗಿ ಅವೇಶ್ ಖಾನ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯ್ ತಲಾ 3 ವಿಕೆಟ್ ಪಡೆದರೆ ಅರ್ಷದೀಪ್ ಸಿಂಗ್ 2 ಹಾಗೂ ರವಿಶ್ರೀನಿವಾಸನ್ ಸಾಯಿ ಕಿಶೋರ್ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ದೊಡ್ಡ ಮೊತ್ತ ಬಾರಿಸಲು ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ನೆರವಾದರು. ಆರಂಭದಿಂದಲೇ ಅಬ್ಬರಿಸಿದ ಜೈಸ್ವಾನ್ 48 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದರು. ಇವರ ದಾಖಲೆಯ ಶತಕದಲ್ಲಿ 8 ಬೌಂಡರಿ ಹಾಗೂ 7 ಅಮೋಘ ಸಿಕ್ಸರ್‌ಗಳು ಸೇರಿದ್ದವು. ಆ ಮೂಲಕ ಯಶಸ್ವಿ ಜೈಸ್ವಾಲ್ ಏಷ್ಯ್ ಗೇಮ್ಸ್‌ನಲ್ಲಿ ಶತಕ ಸಿಡಿಸಿದ ಮೊದಲ ಕ್ರಿಕೆಟರ್ ಎಂಬ ದಾಖಲೆ ಬರೆದಿದರು.

ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ನಿರಾಸೆ ಮೂಡಿಸಿದರು. ಗಾಯಕ್ವಾಡ್ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಸೇರಿ 25 ರನ್ ಗಳಿಸಿ ದೀಪೇಂದ್ರ ಸಿಂಗ್ ಬೌಲಿಂಗ್‌ನಲ್ಲಿ ರೋಹಿತ್ ಪೌಡೆಲ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು. ಆ ಬಳಿಕ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಬಂದ ತಿಲಕ್ ವರ್ಮಾ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೈದರಾಬಾದ್‌ನ ತಿಲಕ್ 10 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿ ಸೋಪಾಲ್ ಕಾಮಿ ಬೌಲಿಂಗ್‌ನಲ್ಲಿ ಬೌಲ್ಡ್ ಆಗುವ ಮೂಲಕ ಬ್ಯಾಟಿಂಗ್‌ನಲ್ಲಿ ವಿಫಲವಾದರು.

ವಿಕೆಟ್ ಕೀಪರ್ ಜಿತೇಶ್ ಶರ್ಮಾ ಬಂದಷ್ಟೇ ವೇಗವಾಗಿ ಪೆಲಿವಿಯನ್ ಸೇರಿಕೊಂಡರು. ಶರ್ಮಾ ನಾಲ್ಕು ಎಸೆತಗಳನ್ನು ಎದುರಿಸಿ 1 ಬೌಂಡರಿ ಸೇರಿ 5 ರನ್ ಗಳಿಸಿ ಸಂದೀಪ್ ಲಮಿಚಾನೆ ಬೌಲಿಂಗ್‌ನಲ್ಲಿ ಔಟ್ ಆದರು.

ಕೊನೆಯಲ್ಲಿ ಶಿವಂ ದುಬೆ 19 ಎಸೆತಗಳಿಂದ 2 ಬೌಂಡರಿ 1 ಸಿಕ್ಸರ್ ಸೇರಿ 25 ರನ್ ಗಳಿಸಿದರೆ ಮತ್ತು ರಿಂಕು ಸಿಂಗ್ 15 ಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್‌ಗಳಿಂದ 37 ರನ್ ಬಾರಿಸಿದರು. ಆ ಮೂಲಕ ತಂಡದ ಮೊತ್ತ 200ರ ಗಡಿ ದಾಟುವಂತೆ ಮಾಡಿದರು. ನೇಪಾಳದ ಪರವಾಗಿ ದೀಪೇಂದ್ರ ಸಿಂಗ್ ಎರಡು ವಿಕೆಟ್ ಪಡೆದರೆ ಸೋಂಪಾಲ್ ಕಾಮಿ ಹಾಗೂ ಸಂದೀಪ್ ಲಮಿಚಾನೆ ತಲಾ 1 ವಿಕೆಟ್ ಗಳಿಸಿದರು. ಉತ್ತಮ ಶ್ರೇಯಾಂಕದ ಆಧಾರದ ಮೇಲೆ ಟೀಂ ಇಂಡಿಯಾ ಏಷ್ಯನ್ ಗೇಮ್ಸ್‌ನಲ್ಲಿ ನೇರವಾಗಿ ಕ್ವಾರ್ಟರ್‌ ಫೈನಲ್‌ಗೆ ಬಂದಿದೆ.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

5 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

14 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

24 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago