ಕ್ರೀಡೆ

ಏಷ್ಯನ್ ಗೇಮ್ಸ್ : ನೇಪಾಳ ಮಣಿಸಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟ ಟೀಂ ಇಂಡಿಯಾ

ಹ್ಯಾಂಗ್‌ಝೌ‌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್‌ ಫೈನಲ್‌ನಲ್ಲಿ ನೇಪಾಳ ತಂಡವನ್ನು 23 ರನ್‌ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

ಟೀಂ ಇಂಡಿಯಾ ನೀಡಿದ್ದ 203 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ನೇಪಾಳ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ವೇಗಿ ಅವೇಶ್ ಖಾನ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯ್ ತಲಾ 3 ವಿಕೆಟ್ ಪಡೆದರೆ ಅರ್ಷದೀಪ್ ಸಿಂಗ್ 2 ಹಾಗೂ ರವಿಶ್ರೀನಿವಾಸನ್ ಸಾಯಿ ಕಿಶೋರ್ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ದೊಡ್ಡ ಮೊತ್ತ ಬಾರಿಸಲು ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ನೆರವಾದರು. ಆರಂಭದಿಂದಲೇ ಅಬ್ಬರಿಸಿದ ಜೈಸ್ವಾನ್ 48 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದರು. ಇವರ ದಾಖಲೆಯ ಶತಕದಲ್ಲಿ 8 ಬೌಂಡರಿ ಹಾಗೂ 7 ಅಮೋಘ ಸಿಕ್ಸರ್‌ಗಳು ಸೇರಿದ್ದವು. ಆ ಮೂಲಕ ಯಶಸ್ವಿ ಜೈಸ್ವಾಲ್ ಏಷ್ಯ್ ಗೇಮ್ಸ್‌ನಲ್ಲಿ ಶತಕ ಸಿಡಿಸಿದ ಮೊದಲ ಕ್ರಿಕೆಟರ್ ಎಂಬ ದಾಖಲೆ ಬರೆದಿದರು.

ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ನಿರಾಸೆ ಮೂಡಿಸಿದರು. ಗಾಯಕ್ವಾಡ್ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಸೇರಿ 25 ರನ್ ಗಳಿಸಿ ದೀಪೇಂದ್ರ ಸಿಂಗ್ ಬೌಲಿಂಗ್‌ನಲ್ಲಿ ರೋಹಿತ್ ಪೌಡೆಲ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು. ಆ ಬಳಿಕ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಬಂದ ತಿಲಕ್ ವರ್ಮಾ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೈದರಾಬಾದ್‌ನ ತಿಲಕ್ 10 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿ ಸೋಪಾಲ್ ಕಾಮಿ ಬೌಲಿಂಗ್‌ನಲ್ಲಿ ಬೌಲ್ಡ್ ಆಗುವ ಮೂಲಕ ಬ್ಯಾಟಿಂಗ್‌ನಲ್ಲಿ ವಿಫಲವಾದರು.

ವಿಕೆಟ್ ಕೀಪರ್ ಜಿತೇಶ್ ಶರ್ಮಾ ಬಂದಷ್ಟೇ ವೇಗವಾಗಿ ಪೆಲಿವಿಯನ್ ಸೇರಿಕೊಂಡರು. ಶರ್ಮಾ ನಾಲ್ಕು ಎಸೆತಗಳನ್ನು ಎದುರಿಸಿ 1 ಬೌಂಡರಿ ಸೇರಿ 5 ರನ್ ಗಳಿಸಿ ಸಂದೀಪ್ ಲಮಿಚಾನೆ ಬೌಲಿಂಗ್‌ನಲ್ಲಿ ಔಟ್ ಆದರು.

ಕೊನೆಯಲ್ಲಿ ಶಿವಂ ದುಬೆ 19 ಎಸೆತಗಳಿಂದ 2 ಬೌಂಡರಿ 1 ಸಿಕ್ಸರ್ ಸೇರಿ 25 ರನ್ ಗಳಿಸಿದರೆ ಮತ್ತು ರಿಂಕು ಸಿಂಗ್ 15 ಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್‌ಗಳಿಂದ 37 ರನ್ ಬಾರಿಸಿದರು. ಆ ಮೂಲಕ ತಂಡದ ಮೊತ್ತ 200ರ ಗಡಿ ದಾಟುವಂತೆ ಮಾಡಿದರು. ನೇಪಾಳದ ಪರವಾಗಿ ದೀಪೇಂದ್ರ ಸಿಂಗ್ ಎರಡು ವಿಕೆಟ್ ಪಡೆದರೆ ಸೋಂಪಾಲ್ ಕಾಮಿ ಹಾಗೂ ಸಂದೀಪ್ ಲಮಿಚಾನೆ ತಲಾ 1 ವಿಕೆಟ್ ಗಳಿಸಿದರು. ಉತ್ತಮ ಶ್ರೇಯಾಂಕದ ಆಧಾರದ ಮೇಲೆ ಟೀಂ ಇಂಡಿಯಾ ಏಷ್ಯನ್ ಗೇಮ್ಸ್‌ನಲ್ಲಿ ನೇರವಾಗಿ ಕ್ವಾರ್ಟರ್‌ ಫೈನಲ್‌ಗೆ ಬಂದಿದೆ.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

51 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

1 hour ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

1 hour ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

1 hour ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

1 hour ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

2 hours ago