ಕ್ರೀಡೆ

ಏಷ್ಯನ್ ಗೇಮ್ಸ್| ಇಂದು ಮೂರು ಚಿನ್ನ: ಒಟ್ಟಾರೆ ದಾಖಲೆಯ 86 ಪದಕ ಭಾರತದ ಮುಡಿಗೆ!

ಹ್ಯಾಂಗ್‌ಝೌ : 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಮೂರು ಚಿನ್ನದ ಪದಕ ಬಂದಿದೆ.

ಆರ್ಚರಿಯಲ್ಲಿ ಭಾರತದ ಮಹಿಳಾ ತಂಡ ಹಾಗೂ ಪುರುಷರ ತಂಡ ಸಹ ಚಿನ್ನದ ಪದಕ ಗೆದ್ದಿದೆ. ವಿಜೆ ಸುರೇಖಾ, ಪರ್ಣೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಅವರನ್ನೊಳಗೊಂಡ ಭಾರತ ತಂಡ ಚೈನಿಸ್ ತೈಪೇ ತಂಡವನ್ನು 230-229 ಅಂಕಗಳೊಂದಿಗೆ ಮಣಿಸಿದೆ.

https://x.com/narendramodi/status/1709803724959584451?s=20

ಆರ್ಚರಿಯಲ್ಲಿ ಒಜಸ್, ಪ್ರಥಮೇಶ್ ಮತ್ತು ಅಭಿಶೇಕ್ ಒಳಗೊಂಡ ಭಾರತದ ಪುರುಷರ ತಂಡ ದಕ್ಷಿಣ ಕೊರಿಯಾ ತಂಡವನ್ನು 235-230 ಅಂಕಗಳೊಂದಿಗೆ ಮಣಿಸುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದೆ.

https://x.com/Media_SAI/status/1709853837618721163?s=20

ಸ್ಕ್ವ್ಯಾಷ್ ನ ಮಿಶ್ರಾ ಡಬಲ್ಸ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಇನ್ನು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೌರವ್ ಘೋಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ಗೆದ್ದಿತ್ತು.

ಕುಸ್ತಿಯ ಫ್ರೀಸ್ಟೈಲ್ 53ಕೆಜಿ ವಿಭಾಗದಲ್ಲಿ ಭಾರತದ ಅಂತಿಮ್ ಕಂಚಿನ ಪದಕ ಗೆದ್ದಿದ್ದಾರೆ.

https://x.com/Media_SAI/status/1709891153498362368?s=20

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 21 ಚಿನ್ನ, 32 ಬೆಳ್ಳಿ ಮತ್ತು 33 ಕಂಚಿನ ಪದಕದೊಂದಿಗೆ 86 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

andolanait

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

15 mins ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

29 mins ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

47 mins ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

1 hour ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago