ಕ್ರೀಡೆ

ಏಷ್ಯನ್ ಗೇಮ್ಸ್| ಇಂದು ಮೂರು ಚಿನ್ನ: ಒಟ್ಟಾರೆ ದಾಖಲೆಯ 86 ಪದಕ ಭಾರತದ ಮುಡಿಗೆ!

ಹ್ಯಾಂಗ್‌ಝೌ : 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಮೂರು ಚಿನ್ನದ ಪದಕ ಬಂದಿದೆ.

ಆರ್ಚರಿಯಲ್ಲಿ ಭಾರತದ ಮಹಿಳಾ ತಂಡ ಹಾಗೂ ಪುರುಷರ ತಂಡ ಸಹ ಚಿನ್ನದ ಪದಕ ಗೆದ್ದಿದೆ. ವಿಜೆ ಸುರೇಖಾ, ಪರ್ಣೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಅವರನ್ನೊಳಗೊಂಡ ಭಾರತ ತಂಡ ಚೈನಿಸ್ ತೈಪೇ ತಂಡವನ್ನು 230-229 ಅಂಕಗಳೊಂದಿಗೆ ಮಣಿಸಿದೆ.

https://x.com/narendramodi/status/1709803724959584451?s=20

ಆರ್ಚರಿಯಲ್ಲಿ ಒಜಸ್, ಪ್ರಥಮೇಶ್ ಮತ್ತು ಅಭಿಶೇಕ್ ಒಳಗೊಂಡ ಭಾರತದ ಪುರುಷರ ತಂಡ ದಕ್ಷಿಣ ಕೊರಿಯಾ ತಂಡವನ್ನು 235-230 ಅಂಕಗಳೊಂದಿಗೆ ಮಣಿಸುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದೆ.

https://x.com/Media_SAI/status/1709853837618721163?s=20

ಸ್ಕ್ವ್ಯಾಷ್ ನ ಮಿಶ್ರಾ ಡಬಲ್ಸ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಇನ್ನು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೌರವ್ ಘೋಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ಗೆದ್ದಿತ್ತು.

ಕುಸ್ತಿಯ ಫ್ರೀಸ್ಟೈಲ್ 53ಕೆಜಿ ವಿಭಾಗದಲ್ಲಿ ಭಾರತದ ಅಂತಿಮ್ ಕಂಚಿನ ಪದಕ ಗೆದ್ದಿದ್ದಾರೆ.

https://x.com/Media_SAI/status/1709891153498362368?s=20

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 21 ಚಿನ್ನ, 32 ಬೆಳ್ಳಿ ಮತ್ತು 33 ಕಂಚಿನ ಪದಕದೊಂದಿಗೆ 86 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

andolanait

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

4 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

6 hours ago