ಕ್ರೀಡೆ

ಏಷ್ಯನ್ ಗೇಮ್ಸ್| ಇಂದು ಮೂರು ಚಿನ್ನ: ಒಟ್ಟಾರೆ ದಾಖಲೆಯ 86 ಪದಕ ಭಾರತದ ಮುಡಿಗೆ!

ಹ್ಯಾಂಗ್‌ಝೌ : 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಮೂರು ಚಿನ್ನದ ಪದಕ ಬಂದಿದೆ.

ಆರ್ಚರಿಯಲ್ಲಿ ಭಾರತದ ಮಹಿಳಾ ತಂಡ ಹಾಗೂ ಪುರುಷರ ತಂಡ ಸಹ ಚಿನ್ನದ ಪದಕ ಗೆದ್ದಿದೆ. ವಿಜೆ ಸುರೇಖಾ, ಪರ್ಣೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಅವರನ್ನೊಳಗೊಂಡ ಭಾರತ ತಂಡ ಚೈನಿಸ್ ತೈಪೇ ತಂಡವನ್ನು 230-229 ಅಂಕಗಳೊಂದಿಗೆ ಮಣಿಸಿದೆ.

https://x.com/narendramodi/status/1709803724959584451?s=20

ಆರ್ಚರಿಯಲ್ಲಿ ಒಜಸ್, ಪ್ರಥಮೇಶ್ ಮತ್ತು ಅಭಿಶೇಕ್ ಒಳಗೊಂಡ ಭಾರತದ ಪುರುಷರ ತಂಡ ದಕ್ಷಿಣ ಕೊರಿಯಾ ತಂಡವನ್ನು 235-230 ಅಂಕಗಳೊಂದಿಗೆ ಮಣಿಸುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದೆ.

https://x.com/Media_SAI/status/1709853837618721163?s=20

ಸ್ಕ್ವ್ಯಾಷ್ ನ ಮಿಶ್ರಾ ಡಬಲ್ಸ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಇನ್ನು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೌರವ್ ಘೋಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ಗೆದ್ದಿತ್ತು.

ಕುಸ್ತಿಯ ಫ್ರೀಸ್ಟೈಲ್ 53ಕೆಜಿ ವಿಭಾಗದಲ್ಲಿ ಭಾರತದ ಅಂತಿಮ್ ಕಂಚಿನ ಪದಕ ಗೆದ್ದಿದ್ದಾರೆ.

https://x.com/Media_SAI/status/1709891153498362368?s=20

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 21 ಚಿನ್ನ, 32 ಬೆಳ್ಳಿ ಮತ್ತು 33 ಕಂಚಿನ ಪದಕದೊಂದಿಗೆ 86 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

andolanait

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago