ಕ್ರೀಡೆ

ಏಷ್ಯನ್ ಗೇಮ್ಸ್| ಇಂದು ಮೂರು ಚಿನ್ನ: ಒಟ್ಟಾರೆ ದಾಖಲೆಯ 86 ಪದಕ ಭಾರತದ ಮುಡಿಗೆ!

ಹ್ಯಾಂಗ್‌ಝೌ : 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಮೂರು ಚಿನ್ನದ ಪದಕ ಬಂದಿದೆ.

ಆರ್ಚರಿಯಲ್ಲಿ ಭಾರತದ ಮಹಿಳಾ ತಂಡ ಹಾಗೂ ಪುರುಷರ ತಂಡ ಸಹ ಚಿನ್ನದ ಪದಕ ಗೆದ್ದಿದೆ. ವಿಜೆ ಸುರೇಖಾ, ಪರ್ಣೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಅವರನ್ನೊಳಗೊಂಡ ಭಾರತ ತಂಡ ಚೈನಿಸ್ ತೈಪೇ ತಂಡವನ್ನು 230-229 ಅಂಕಗಳೊಂದಿಗೆ ಮಣಿಸಿದೆ.

https://x.com/narendramodi/status/1709803724959584451?s=20

ಆರ್ಚರಿಯಲ್ಲಿ ಒಜಸ್, ಪ್ರಥಮೇಶ್ ಮತ್ತು ಅಭಿಶೇಕ್ ಒಳಗೊಂಡ ಭಾರತದ ಪುರುಷರ ತಂಡ ದಕ್ಷಿಣ ಕೊರಿಯಾ ತಂಡವನ್ನು 235-230 ಅಂಕಗಳೊಂದಿಗೆ ಮಣಿಸುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದೆ.

https://x.com/Media_SAI/status/1709853837618721163?s=20

ಸ್ಕ್ವ್ಯಾಷ್ ನ ಮಿಶ್ರಾ ಡಬಲ್ಸ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಇನ್ನು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೌರವ್ ಘೋಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ಗೆದ್ದಿತ್ತು.

ಕುಸ್ತಿಯ ಫ್ರೀಸ್ಟೈಲ್ 53ಕೆಜಿ ವಿಭಾಗದಲ್ಲಿ ಭಾರತದ ಅಂತಿಮ್ ಕಂಚಿನ ಪದಕ ಗೆದ್ದಿದ್ದಾರೆ.

https://x.com/Media_SAI/status/1709891153498362368?s=20

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 21 ಚಿನ್ನ, 32 ಬೆಳ್ಳಿ ಮತ್ತು 33 ಕಂಚಿನ ಪದಕದೊಂದಿಗೆ 86 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

andolanait

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago