ಕ್ರೀಡೆ

ಏಷ್ಯನ್ ಗೇಮ್ಸ್| ಇಂದು ಮೂರು ಚಿನ್ನ: ಒಟ್ಟಾರೆ ದಾಖಲೆಯ 86 ಪದಕ ಭಾರತದ ಮುಡಿಗೆ!

ಹ್ಯಾಂಗ್‌ಝೌ : 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಮೂರು ಚಿನ್ನದ ಪದಕ ಬಂದಿದೆ.

ಆರ್ಚರಿಯಲ್ಲಿ ಭಾರತದ ಮಹಿಳಾ ತಂಡ ಹಾಗೂ ಪುರುಷರ ತಂಡ ಸಹ ಚಿನ್ನದ ಪದಕ ಗೆದ್ದಿದೆ. ವಿಜೆ ಸುರೇಖಾ, ಪರ್ಣೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಅವರನ್ನೊಳಗೊಂಡ ಭಾರತ ತಂಡ ಚೈನಿಸ್ ತೈಪೇ ತಂಡವನ್ನು 230-229 ಅಂಕಗಳೊಂದಿಗೆ ಮಣಿಸಿದೆ.

https://x.com/narendramodi/status/1709803724959584451?s=20

ಆರ್ಚರಿಯಲ್ಲಿ ಒಜಸ್, ಪ್ರಥಮೇಶ್ ಮತ್ತು ಅಭಿಶೇಕ್ ಒಳಗೊಂಡ ಭಾರತದ ಪುರುಷರ ತಂಡ ದಕ್ಷಿಣ ಕೊರಿಯಾ ತಂಡವನ್ನು 235-230 ಅಂಕಗಳೊಂದಿಗೆ ಮಣಿಸುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದೆ.

https://x.com/Media_SAI/status/1709853837618721163?s=20

ಸ್ಕ್ವ್ಯಾಷ್ ನ ಮಿಶ್ರಾ ಡಬಲ್ಸ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಇನ್ನು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೌರವ್ ಘೋಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ಗೆದ್ದಿತ್ತು.

ಕುಸ್ತಿಯ ಫ್ರೀಸ್ಟೈಲ್ 53ಕೆಜಿ ವಿಭಾಗದಲ್ಲಿ ಭಾರತದ ಅಂತಿಮ್ ಕಂಚಿನ ಪದಕ ಗೆದ್ದಿದ್ದಾರೆ.

https://x.com/Media_SAI/status/1709891153498362368?s=20

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 21 ಚಿನ್ನ, 32 ಬೆಳ್ಳಿ ಮತ್ತು 33 ಕಂಚಿನ ಪದಕದೊಂದಿಗೆ 86 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

andolanait

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

22 mins ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

1 hour ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

5 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

10 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

10 hours ago