ಬೆಂಗಳೂರು : ಚೀನಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕದ ಸುಹಾಸ್ ಯತಿರಾಜ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸುಹಾಸ್ ಅವರನ್ನು ಅಭಿನಂದಿಸಿದ್ದಾರೆ. ಸುಹಾಸ್ ಯತಿರಾಜ್ ಅವರು ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಚಿನ್ನದ ಪದಕ ಜಯಿಸಿರುವ ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಮೋಘ ಸಾಧನೆ ನಾಡಿನ ಪ್ರತಿಯೊಬ್ಬರಿಗೂ ಹೆಮ್ಮೆಯುಂಟುಮಾಡಿದೆ ಎಂದು ಶ್ಲಾಘಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಸುಹಾಸ್ ಅವರಿಗೆ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ. ಇದು ಹೆಮ್ಮೆಯ ಕ್ಷಣ!! ಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್-4 ವಿಭಾಗದಲ್ಲಿ ಚಿನ್ನವನ್ನು ಗೆದ್ದ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ರಾಷ್ಟ್ರವು ನಿಮ್ಮ ಯಶಸ್ಸನ್ನು ಆಚರಿಸುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.
https://x.com/CMofKarnataka/status/1718192867569709159?s=20
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…