ಬೆಂಗಳೂರು : ಚೀನಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕದ ಸುಹಾಸ್ ಯತಿರಾಜ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸುಹಾಸ್ ಅವರನ್ನು ಅಭಿನಂದಿಸಿದ್ದಾರೆ. ಸುಹಾಸ್ ಯತಿರಾಜ್ ಅವರು ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಚಿನ್ನದ ಪದಕ ಜಯಿಸಿರುವ ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಮೋಘ ಸಾಧನೆ ನಾಡಿನ ಪ್ರತಿಯೊಬ್ಬರಿಗೂ ಹೆಮ್ಮೆಯುಂಟುಮಾಡಿದೆ ಎಂದು ಶ್ಲಾಘಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಸುಹಾಸ್ ಅವರಿಗೆ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ. ಇದು ಹೆಮ್ಮೆಯ ಕ್ಷಣ!! ಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್-4 ವಿಭಾಗದಲ್ಲಿ ಚಿನ್ನವನ್ನು ಗೆದ್ದ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ರಾಷ್ಟ್ರವು ನಿಮ್ಮ ಯಶಸ್ಸನ್ನು ಆಚರಿಸುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.
https://x.com/CMofKarnataka/status/1718192867569709159?s=20
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…