ಕ್ರೀಡೆ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಆ್ಯರನ್‌ ಫಿಂಚ್‌

ಮೆಲ್ಬರ್ನ್‌ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ ಆಟ ಮುಂದುವರಿಸಲು ನಿರ್ಧರಿಸಿದ್ದಾರೆ.

‘ಟಿ20ಯಲ್ಲಿ ನಮಗೆ ವಿಶ್ವಕಪ್‌ ಗೆದ್ದುಕೊಟ್ಟ ಮತ್ತು ಸುದೀರ್ಘ ಅವಧಿಯವರೆಗೆ ತಂಡವನ್ನು ಮುನ್ನಡೆಸಿದ್ದ ನಾಯಕ ತಮ್ಮ ವೃತ್ತಿಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಆ್ಯರನ್‌ ಫಿಂಚ್‌ ಅವರಿಗೆ ಧನ್ಯವಾದಗಳು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ಫಿಂಚ್‌ ಅವರ ನಿವೃತ್ತಿ ನಿರ್ಧಾರ ನಿರೀಕ್ಷಿತವೇ ಆಗಿತ್ತು. ಐದು ಟೆಸ್ಟ್‌ಗಳಲ್ಲಿ ಆಡಿದ್ದ ಅವರಿಗೆ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಫಾರ್ಮ್‌ ಕಳೆದುಕೊಂಡ ಕಾರಣ ಕಳೆದ ವರ್ಷ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

ದುಬೈನಲ್ಲಿ 2021 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ತಂಡವನ್ನು ಟ್ರೋಫಿಯತ್ತ ಮುನ್ನಡೆಸಿದ್ದರು. ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಗೆದ್ದಿತ್ತು.

ಆದರೆ ಕಳೆದ ವರ್ಷ ತವರು ನೆಲದಲ್ಲಿ ನಡೆದಿದ್ದ ಚುಟುಕು ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

51 mins ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

1 hour ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

2 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

2 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

2 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

3 hours ago