ಕ್ರೀಡೆ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಆ್ಯರನ್‌ ಫಿಂಚ್‌

ಮೆಲ್ಬರ್ನ್‌ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ ಆಟ ಮುಂದುವರಿಸಲು ನಿರ್ಧರಿಸಿದ್ದಾರೆ.

‘ಟಿ20ಯಲ್ಲಿ ನಮಗೆ ವಿಶ್ವಕಪ್‌ ಗೆದ್ದುಕೊಟ್ಟ ಮತ್ತು ಸುದೀರ್ಘ ಅವಧಿಯವರೆಗೆ ತಂಡವನ್ನು ಮುನ್ನಡೆಸಿದ್ದ ನಾಯಕ ತಮ್ಮ ವೃತ್ತಿಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಆ್ಯರನ್‌ ಫಿಂಚ್‌ ಅವರಿಗೆ ಧನ್ಯವಾದಗಳು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ಫಿಂಚ್‌ ಅವರ ನಿವೃತ್ತಿ ನಿರ್ಧಾರ ನಿರೀಕ್ಷಿತವೇ ಆಗಿತ್ತು. ಐದು ಟೆಸ್ಟ್‌ಗಳಲ್ಲಿ ಆಡಿದ್ದ ಅವರಿಗೆ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಫಾರ್ಮ್‌ ಕಳೆದುಕೊಂಡ ಕಾರಣ ಕಳೆದ ವರ್ಷ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

ದುಬೈನಲ್ಲಿ 2021 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ತಂಡವನ್ನು ಟ್ರೋಫಿಯತ್ತ ಮುನ್ನಡೆಸಿದ್ದರು. ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಗೆದ್ದಿತ್ತು.

ಆದರೆ ಕಳೆದ ವರ್ಷ ತವರು ನೆಲದಲ್ಲಿ ನಡೆದಿದ್ದ ಚುಟುಕು ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

15 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

16 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

17 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

18 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

23 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

23 hours ago