ಕ್ರೀಡೆ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಆ್ಯರನ್‌ ಫಿಂಚ್‌

ಮೆಲ್ಬರ್ನ್‌ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ ಆಟ ಮುಂದುವರಿಸಲು ನಿರ್ಧರಿಸಿದ್ದಾರೆ.

‘ಟಿ20ಯಲ್ಲಿ ನಮಗೆ ವಿಶ್ವಕಪ್‌ ಗೆದ್ದುಕೊಟ್ಟ ಮತ್ತು ಸುದೀರ್ಘ ಅವಧಿಯವರೆಗೆ ತಂಡವನ್ನು ಮುನ್ನಡೆಸಿದ್ದ ನಾಯಕ ತಮ್ಮ ವೃತ್ತಿಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಆ್ಯರನ್‌ ಫಿಂಚ್‌ ಅವರಿಗೆ ಧನ್ಯವಾದಗಳು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ಫಿಂಚ್‌ ಅವರ ನಿವೃತ್ತಿ ನಿರ್ಧಾರ ನಿರೀಕ್ಷಿತವೇ ಆಗಿತ್ತು. ಐದು ಟೆಸ್ಟ್‌ಗಳಲ್ಲಿ ಆಡಿದ್ದ ಅವರಿಗೆ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಫಾರ್ಮ್‌ ಕಳೆದುಕೊಂಡ ಕಾರಣ ಕಳೆದ ವರ್ಷ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

ದುಬೈನಲ್ಲಿ 2021 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ತಂಡವನ್ನು ಟ್ರೋಫಿಯತ್ತ ಮುನ್ನಡೆಸಿದ್ದರು. ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಗೆದ್ದಿತ್ತು.

ಆದರೆ ಕಳೆದ ವರ್ಷ ತವರು ನೆಲದಲ್ಲಿ ನಡೆದಿದ್ದ ಚುಟುಕು ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago