Mysore
17
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

AUS V/S ENG: ಲಯಕ್ಕೆ ಮರಳುವ ನಿರೀಕ್ಷೆಯಲ್ಲಿ ಸೂರ್ಯ, ಸಂಜು

ಮುಂಬೈ: ಇಂಗ್ಲೆಂಡ್‌ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.

ಈ ಸರಣಿಯಲ್ಲಿ ಸರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಅಂತ ಹೇಳಿಕೊಳ್ಳುವ ಹಾಗೆ ಪ್ರದರ್ಶನ ನೀಡಿಲ್ಲ. ಸತತವಾಗಿ ಇಬ್ಬರು ವೈಫಲ್ಯ ಅನುಭವಿಸುತ್ತಿದ್ದಾರೆ. ಭಾನುವಾರ ನಡೆಯುವ ಕೊನೆಯ ಪಂದ್ಯದಲ್ಲಿ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ಮುಂಬರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾದ 15 ಸದಸ್ಯರನ್ನು ಆಯ್ಕೆ ಮಾಡಿದೆ. ಮುಂದಿನ ಚಾಂಪಿಯನ್ಸ್‌ ಟ್ರೋಫಿಯಲ್ಲಿ 11ರ ಬಳಗದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಈ ಸರಣಿಯಲ್ಲಿ ಫಾರ್ಮ್‌ ಕಂಡುಕೊಳ್ಳುವುದು ಮುಖ್ಯವಾಗಿದೆ.

Tags:
error: Content is protected !!