ಕ್ರೀಡೆ

AUS V/S ENG: ಭಾರತ ಸರಣಿ ಕೈವಶ ಮಾಡಿಕೊಳ್ಳುವುದೇ?

ಪುಣೆ: ಶುಕ್ರವಾರ ಇಲ್ಲಿ ನಡೆಯಲಿರುವ ಭಾರತ ಮತ್ತ ಇಂಗ್ಲೆಂಡ್‌ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದೇ ಎಂದು ಕಾದು ನೋಡಬೇಕಿದೆ.

ಈಗಾಗಲೇ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿರುವ ಭಾರತ ತಂಡ ಈ ಪಂದ್ಯ ಗೆದ್ದು ಸರಣಿ ಗೆಲುವು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.

ಇತ್ತ ವೇಗದ ಬೌಲರ್‌ಗಳ ಸಹಾಯದಿಂದ 3ನೇ ಟಿ20 ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್‌ ತಂಡ ನಾಲ್ಕನೇ ಟಿ20 ಪಂದ್ಯ ಗೆದ್ದು ಸಮಬಲ ಸಾಧಿಸುವ ವಿಶ್ವಾಸದಲ್ಲಿದೆ.

ಭಾರತಕ್ಕೆ ಬ್ಯಾಟರ್‌ಗಳ ಫಾರ್ಮ್‌ ಕೊರತೆ:

ಇಂಗ್ಲೆಂಡ್‌ ಬೌಲರ್‌ಗಳ ಎದುರು ಭಾರತದ ವಿಕೆಟ್‌ ಕೀಪರ್‌ ಸಂಜು ಸಾಮ್ಸನ್‌ ದೊಡ್ಡ ಇನ್ನಿಂಗ್ಸ್‌ ಆಡಲು ವಿಫಲವಾಗುತ್ತಿದ್ದಾರೆ. ಜೊತೆಗೆ ನಾಯಕ ಸೂರ್ಯಕುಮಾರ್‌ ಯಾದವ್‌, ಅಬಿಷೇಕ್‌ ಶರ್ಮಾ, ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಲು ವಿಫಲವಾಗಿರುವುದು ತಂಡದ ಕೋಚ್‌ ಗೌತಮ್‌ ಗಂಭೀರ್‌ ಹಾಗೂ ವ್ಯವಸ್ಥಾಪಕರಿಗೆ ತಲೆನೋವಾಗಿದೆ.

ಪಂದ್ಯ ಆರಂಭ: ರಾತ್ರಿ 7 ಗಂಟೆಗೆ

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago