Categories: ಕ್ರೀಡೆ

AUS vs IND Test: ಭಾರತಕ್ಕೆ ಐತಿಹಾಸಿಕ ದಾಖಲೆಯ ಜಯ

ಪರ್ತ್:‌ ಬಾರ್ಡರ್-‌ ಗವಸ್ಕಾರ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ಇದು ಟೀಂ ಇಂಡಿಯಾಗೆ ಏಷ್ಯಾದ ಹೊರಗೆ ದೊರೆತ ಭಾರಿ ರನ್‌ಗಳ ಅಂತರದ ಗೆಲುವಾಗಿದೆ. ಉತ್ತಮ ಬೌಲಿಂಗ್‌ ಪ್ರದರ್ಶನದ ಜೊತೆಗೆ ಸಾಂಘಿಕ ಹೋರಾಟವು ಗೆಲುವಿಗೆ ಕಾರಣವಾಗಿದೆ.

ಶುಕ್ರವಾರ ಆರಂಭವಾದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್‌ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ನಾಯಕನ ನಂಬಿಕೆ ಉಳಿಸುವಲ್ಲಿ ಬ್ಯಾಟರ್‌ಗಳು ಸೋತರು. ಆಸ್ಟ್ರೇಲಿಯಾದ ಬಿಗಿ ಬೌಲಿಂಗ್‌ ದಾಳಿಗೆ ಇಂಡಿಯಾ 150 ರನ್‌ಗಳಿಗೆ ಆಲೌಟ್‌ ಆಯಿತು. ಆಸ್ಟ್ರೇಲಿಯಾ ಪರ ಹ್ಯಾಜಲ್‌ವುಡ್‌ 4 ವಿಕೆಟ್‌ ಪಡೆದು ಮಿಂಚಿದರು.

ನಂತರ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಇಂಡಿಯಾದ ವೇಗದ ದಾಳಿಗೆ ತತ್ತರಿಸಿ 104‌ ರನ್‌ಗಳಿಗೆ ಆಲೌಟ್ ಆಯಿತು. ಬುಮ್ರಾ 30ರನ್‌ ನೀಡಿ 5 ವಿಕೆಟ್‌ ಪಡೆಯುವ ಮೂಲಕ ಯಶಸ್ವಿ ಬೌಲರ್‌ ಎನಿಸಿದರು.

46 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಡಿಯಾಗೆ ಬ್ಯಾಟರ್‌ಗಳು ಉತ್ತಮ ಆರಂಭ ನೀಡಿದರು. ಕೆಎಲ್‌ ರಾಹುಲ್‌ ಹಾಗೂ ಜೈಸ್ವಾಲ್‌ 201 ರನ್‌ಗಳ ಜೊತೆಯಾಟ ಆಡುವ ಮೂಲಕ ಇಂಡಿಯಾಗೆ ಭದ್ರ ಬುನಾದಿ ಹಾಕಿದರು.

ಕೆಎಲ್‌ ರಾಹುಲ್‌ 77(176) ರನ್‌ಗಳಿಗೆ ತಮ್ಮ ಇನ್ನಿಂಗ್ಸ್‌ ಮುಗಿಸಿದರು. ನಂತರ ಜೈಸ್ವಾಲ್‌ ಜೊತೆಗೂಡಿದ ವಿರಾಟ್‌ ಅಬ್ಬರದ ಬ್ಯಾಟಿಂಗ್‌ನಿಂದ ದಾಖಲೆಯ ಶತಕ 100(143) ಪೂರೈಸಿ ಅಜೇಯರಾಗಿ ಉಳಿದರೆ, ಜೈಸ್ವಾಲ್‌ 161(297) ರನ್‌ಗೆ ಔಟಾದರು.

ತಂಡದ ಮೊತ್ತ 6 ವಿಕೆಟ್‌ಗೆ 487ರನ್‌ ಗಳಿಸಿದಾಗ ಟೀಂ ಇಂಡಿಯಾದ ನಾಯಕ ಡಿಕ್ಲೇರ್ ಮಾಡಿಕೊಂಡು 534 ರನ್‌ಗಳ ಬೃಹತ್‌ ಮೊತ್ತದ ಗುರಿ ಎದುರಾಳಿಗೆ ನೀಡಿದರು. ಮೂರನೇ ದಿನದಾಂತ್ಯದಲ್ಲಿ ಬ್ಯಾಟಿಂಗ್‌ ಆರಂಭಿಸಿದ ಅತಿಥೇಯ ತಂಡವು 12 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.

ಒತ್ತಡದಲ್ಲೇ ನಾಲ್ಕನೇ ದಿನ ಆರಂಭಿಸಿದ ಆಸ್ಟ್ರೇಲಿಯಾ ತಂಡವು 238 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಭಾರತದ ಎದುರು 295 ರನ್‌ಗಳ ಸೋಲೊಪ್ಪಿಕೊಂಡಿತು.

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌ (89 ರನ್)‌, ಮಿಚೆಲ್‌ ಮಾರ್ಷ್(‌47ರನ್)‌, ಮತ್ತು ಅಲೆಕ್ಸ್‌ ಕ್ಯಾರಿ (36ರನ್)‌ ಹೋರಾಟ ನಡೆಸಿದರು ಸೋಲು ತಪ್ಪಿಸಲು ಆಗಲಿಲ್ಲ.

ಮತ್ತೆ ಮಿಂಚಿದ ಬುಮ್ರಾ ಹಾಗೂ ಸಿರಾಜ್‌ 3 ವಿಕೆಟ್‌ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌ ಹಾಗೂ ಹರ್ಷಿತ್‌ ರಾಣಾ ನಿತೀಶ್‌ ರೆಡ್ಡಿ ತಲಾ ಒಂದು ವಿಕೆಟ್‌ ಪಡೆದರು.

ನಾಯಕ ಜಸ್ಪ್ರೀತ್‌ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

2 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

2 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

5 hours ago