Categories: ಕ್ರೀಡೆ

AUS vs IND Test: ಭಾರತಕ್ಕೆ ಐತಿಹಾಸಿಕ ದಾಖಲೆಯ ಜಯ

ಪರ್ತ್:‌ ಬಾರ್ಡರ್-‌ ಗವಸ್ಕಾರ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ಇದು ಟೀಂ ಇಂಡಿಯಾಗೆ ಏಷ್ಯಾದ ಹೊರಗೆ ದೊರೆತ ಭಾರಿ ರನ್‌ಗಳ ಅಂತರದ ಗೆಲುವಾಗಿದೆ. ಉತ್ತಮ ಬೌಲಿಂಗ್‌ ಪ್ರದರ್ಶನದ ಜೊತೆಗೆ ಸಾಂಘಿಕ ಹೋರಾಟವು ಗೆಲುವಿಗೆ ಕಾರಣವಾಗಿದೆ.

ಶುಕ್ರವಾರ ಆರಂಭವಾದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್‌ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ನಾಯಕನ ನಂಬಿಕೆ ಉಳಿಸುವಲ್ಲಿ ಬ್ಯಾಟರ್‌ಗಳು ಸೋತರು. ಆಸ್ಟ್ರೇಲಿಯಾದ ಬಿಗಿ ಬೌಲಿಂಗ್‌ ದಾಳಿಗೆ ಇಂಡಿಯಾ 150 ರನ್‌ಗಳಿಗೆ ಆಲೌಟ್‌ ಆಯಿತು. ಆಸ್ಟ್ರೇಲಿಯಾ ಪರ ಹ್ಯಾಜಲ್‌ವುಡ್‌ 4 ವಿಕೆಟ್‌ ಪಡೆದು ಮಿಂಚಿದರು.

ನಂತರ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಇಂಡಿಯಾದ ವೇಗದ ದಾಳಿಗೆ ತತ್ತರಿಸಿ 104‌ ರನ್‌ಗಳಿಗೆ ಆಲೌಟ್ ಆಯಿತು. ಬುಮ್ರಾ 30ರನ್‌ ನೀಡಿ 5 ವಿಕೆಟ್‌ ಪಡೆಯುವ ಮೂಲಕ ಯಶಸ್ವಿ ಬೌಲರ್‌ ಎನಿಸಿದರು.

46 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಡಿಯಾಗೆ ಬ್ಯಾಟರ್‌ಗಳು ಉತ್ತಮ ಆರಂಭ ನೀಡಿದರು. ಕೆಎಲ್‌ ರಾಹುಲ್‌ ಹಾಗೂ ಜೈಸ್ವಾಲ್‌ 201 ರನ್‌ಗಳ ಜೊತೆಯಾಟ ಆಡುವ ಮೂಲಕ ಇಂಡಿಯಾಗೆ ಭದ್ರ ಬುನಾದಿ ಹಾಕಿದರು.

ಕೆಎಲ್‌ ರಾಹುಲ್‌ 77(176) ರನ್‌ಗಳಿಗೆ ತಮ್ಮ ಇನ್ನಿಂಗ್ಸ್‌ ಮುಗಿಸಿದರು. ನಂತರ ಜೈಸ್ವಾಲ್‌ ಜೊತೆಗೂಡಿದ ವಿರಾಟ್‌ ಅಬ್ಬರದ ಬ್ಯಾಟಿಂಗ್‌ನಿಂದ ದಾಖಲೆಯ ಶತಕ 100(143) ಪೂರೈಸಿ ಅಜೇಯರಾಗಿ ಉಳಿದರೆ, ಜೈಸ್ವಾಲ್‌ 161(297) ರನ್‌ಗೆ ಔಟಾದರು.

ತಂಡದ ಮೊತ್ತ 6 ವಿಕೆಟ್‌ಗೆ 487ರನ್‌ ಗಳಿಸಿದಾಗ ಟೀಂ ಇಂಡಿಯಾದ ನಾಯಕ ಡಿಕ್ಲೇರ್ ಮಾಡಿಕೊಂಡು 534 ರನ್‌ಗಳ ಬೃಹತ್‌ ಮೊತ್ತದ ಗುರಿ ಎದುರಾಳಿಗೆ ನೀಡಿದರು. ಮೂರನೇ ದಿನದಾಂತ್ಯದಲ್ಲಿ ಬ್ಯಾಟಿಂಗ್‌ ಆರಂಭಿಸಿದ ಅತಿಥೇಯ ತಂಡವು 12 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.

ಒತ್ತಡದಲ್ಲೇ ನಾಲ್ಕನೇ ದಿನ ಆರಂಭಿಸಿದ ಆಸ್ಟ್ರೇಲಿಯಾ ತಂಡವು 238 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಭಾರತದ ಎದುರು 295 ರನ್‌ಗಳ ಸೋಲೊಪ್ಪಿಕೊಂಡಿತು.

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌ (89 ರನ್)‌, ಮಿಚೆಲ್‌ ಮಾರ್ಷ್(‌47ರನ್)‌, ಮತ್ತು ಅಲೆಕ್ಸ್‌ ಕ್ಯಾರಿ (36ರನ್)‌ ಹೋರಾಟ ನಡೆಸಿದರು ಸೋಲು ತಪ್ಪಿಸಲು ಆಗಲಿಲ್ಲ.

ಮತ್ತೆ ಮಿಂಚಿದ ಬುಮ್ರಾ ಹಾಗೂ ಸಿರಾಜ್‌ 3 ವಿಕೆಟ್‌ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌ ಹಾಗೂ ಹರ್ಷಿತ್‌ ರಾಣಾ ನಿತೀಶ್‌ ರೆಡ್ಡಿ ತಲಾ ಒಂದು ವಿಕೆಟ್‌ ಪಡೆದರು.

ನಾಯಕ ಜಸ್ಪ್ರೀತ್‌ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

11 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

12 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

12 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

12 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

12 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

13 hours ago