Categories: ಕ್ರೀಡೆ

AUS vs IND Test: ಭಾರತಕ್ಕೆ ಐತಿಹಾಸಿಕ ದಾಖಲೆಯ ಜಯ

ಪರ್ತ್:‌ ಬಾರ್ಡರ್-‌ ಗವಸ್ಕಾರ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ಇದು ಟೀಂ ಇಂಡಿಯಾಗೆ ಏಷ್ಯಾದ ಹೊರಗೆ ದೊರೆತ ಭಾರಿ ರನ್‌ಗಳ ಅಂತರದ ಗೆಲುವಾಗಿದೆ. ಉತ್ತಮ ಬೌಲಿಂಗ್‌ ಪ್ರದರ್ಶನದ ಜೊತೆಗೆ ಸಾಂಘಿಕ ಹೋರಾಟವು ಗೆಲುವಿಗೆ ಕಾರಣವಾಗಿದೆ.

ಶುಕ್ರವಾರ ಆರಂಭವಾದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್‌ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ನಾಯಕನ ನಂಬಿಕೆ ಉಳಿಸುವಲ್ಲಿ ಬ್ಯಾಟರ್‌ಗಳು ಸೋತರು. ಆಸ್ಟ್ರೇಲಿಯಾದ ಬಿಗಿ ಬೌಲಿಂಗ್‌ ದಾಳಿಗೆ ಇಂಡಿಯಾ 150 ರನ್‌ಗಳಿಗೆ ಆಲೌಟ್‌ ಆಯಿತು. ಆಸ್ಟ್ರೇಲಿಯಾ ಪರ ಹ್ಯಾಜಲ್‌ವುಡ್‌ 4 ವಿಕೆಟ್‌ ಪಡೆದು ಮಿಂಚಿದರು.

ನಂತರ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಇಂಡಿಯಾದ ವೇಗದ ದಾಳಿಗೆ ತತ್ತರಿಸಿ 104‌ ರನ್‌ಗಳಿಗೆ ಆಲೌಟ್ ಆಯಿತು. ಬುಮ್ರಾ 30ರನ್‌ ನೀಡಿ 5 ವಿಕೆಟ್‌ ಪಡೆಯುವ ಮೂಲಕ ಯಶಸ್ವಿ ಬೌಲರ್‌ ಎನಿಸಿದರು.

46 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಡಿಯಾಗೆ ಬ್ಯಾಟರ್‌ಗಳು ಉತ್ತಮ ಆರಂಭ ನೀಡಿದರು. ಕೆಎಲ್‌ ರಾಹುಲ್‌ ಹಾಗೂ ಜೈಸ್ವಾಲ್‌ 201 ರನ್‌ಗಳ ಜೊತೆಯಾಟ ಆಡುವ ಮೂಲಕ ಇಂಡಿಯಾಗೆ ಭದ್ರ ಬುನಾದಿ ಹಾಕಿದರು.

ಕೆಎಲ್‌ ರಾಹುಲ್‌ 77(176) ರನ್‌ಗಳಿಗೆ ತಮ್ಮ ಇನ್ನಿಂಗ್ಸ್‌ ಮುಗಿಸಿದರು. ನಂತರ ಜೈಸ್ವಾಲ್‌ ಜೊತೆಗೂಡಿದ ವಿರಾಟ್‌ ಅಬ್ಬರದ ಬ್ಯಾಟಿಂಗ್‌ನಿಂದ ದಾಖಲೆಯ ಶತಕ 100(143) ಪೂರೈಸಿ ಅಜೇಯರಾಗಿ ಉಳಿದರೆ, ಜೈಸ್ವಾಲ್‌ 161(297) ರನ್‌ಗೆ ಔಟಾದರು.

ತಂಡದ ಮೊತ್ತ 6 ವಿಕೆಟ್‌ಗೆ 487ರನ್‌ ಗಳಿಸಿದಾಗ ಟೀಂ ಇಂಡಿಯಾದ ನಾಯಕ ಡಿಕ್ಲೇರ್ ಮಾಡಿಕೊಂಡು 534 ರನ್‌ಗಳ ಬೃಹತ್‌ ಮೊತ್ತದ ಗುರಿ ಎದುರಾಳಿಗೆ ನೀಡಿದರು. ಮೂರನೇ ದಿನದಾಂತ್ಯದಲ್ಲಿ ಬ್ಯಾಟಿಂಗ್‌ ಆರಂಭಿಸಿದ ಅತಿಥೇಯ ತಂಡವು 12 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.

ಒತ್ತಡದಲ್ಲೇ ನಾಲ್ಕನೇ ದಿನ ಆರಂಭಿಸಿದ ಆಸ್ಟ್ರೇಲಿಯಾ ತಂಡವು 238 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಭಾರತದ ಎದುರು 295 ರನ್‌ಗಳ ಸೋಲೊಪ್ಪಿಕೊಂಡಿತು.

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌ (89 ರನ್)‌, ಮಿಚೆಲ್‌ ಮಾರ್ಷ್(‌47ರನ್)‌, ಮತ್ತು ಅಲೆಕ್ಸ್‌ ಕ್ಯಾರಿ (36ರನ್)‌ ಹೋರಾಟ ನಡೆಸಿದರು ಸೋಲು ತಪ್ಪಿಸಲು ಆಗಲಿಲ್ಲ.

ಮತ್ತೆ ಮಿಂಚಿದ ಬುಮ್ರಾ ಹಾಗೂ ಸಿರಾಜ್‌ 3 ವಿಕೆಟ್‌ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌ ಹಾಗೂ ಹರ್ಷಿತ್‌ ರಾಣಾ ನಿತೀಶ್‌ ರೆಡ್ಡಿ ತಲಾ ಒಂದು ವಿಕೆಟ್‌ ಪಡೆದರು.

ನಾಯಕ ಜಸ್ಪ್ರೀತ್‌ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago