Categories: ಕ್ರೀಡೆ

AUS vs IND Test: ಭಾರತಕ್ಕೆ ಐತಿಹಾಸಿಕ ದಾಖಲೆಯ ಜಯ

ಪರ್ತ್:‌ ಬಾರ್ಡರ್-‌ ಗವಸ್ಕಾರ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ಇದು ಟೀಂ ಇಂಡಿಯಾಗೆ ಏಷ್ಯಾದ ಹೊರಗೆ ದೊರೆತ ಭಾರಿ ರನ್‌ಗಳ ಅಂತರದ ಗೆಲುವಾಗಿದೆ. ಉತ್ತಮ ಬೌಲಿಂಗ್‌ ಪ್ರದರ್ಶನದ ಜೊತೆಗೆ ಸಾಂಘಿಕ ಹೋರಾಟವು ಗೆಲುವಿಗೆ ಕಾರಣವಾಗಿದೆ.

ಶುಕ್ರವಾರ ಆರಂಭವಾದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್‌ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ನಾಯಕನ ನಂಬಿಕೆ ಉಳಿಸುವಲ್ಲಿ ಬ್ಯಾಟರ್‌ಗಳು ಸೋತರು. ಆಸ್ಟ್ರೇಲಿಯಾದ ಬಿಗಿ ಬೌಲಿಂಗ್‌ ದಾಳಿಗೆ ಇಂಡಿಯಾ 150 ರನ್‌ಗಳಿಗೆ ಆಲೌಟ್‌ ಆಯಿತು. ಆಸ್ಟ್ರೇಲಿಯಾ ಪರ ಹ್ಯಾಜಲ್‌ವುಡ್‌ 4 ವಿಕೆಟ್‌ ಪಡೆದು ಮಿಂಚಿದರು.

ನಂತರ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಇಂಡಿಯಾದ ವೇಗದ ದಾಳಿಗೆ ತತ್ತರಿಸಿ 104‌ ರನ್‌ಗಳಿಗೆ ಆಲೌಟ್ ಆಯಿತು. ಬುಮ್ರಾ 30ರನ್‌ ನೀಡಿ 5 ವಿಕೆಟ್‌ ಪಡೆಯುವ ಮೂಲಕ ಯಶಸ್ವಿ ಬೌಲರ್‌ ಎನಿಸಿದರು.

46 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಡಿಯಾಗೆ ಬ್ಯಾಟರ್‌ಗಳು ಉತ್ತಮ ಆರಂಭ ನೀಡಿದರು. ಕೆಎಲ್‌ ರಾಹುಲ್‌ ಹಾಗೂ ಜೈಸ್ವಾಲ್‌ 201 ರನ್‌ಗಳ ಜೊತೆಯಾಟ ಆಡುವ ಮೂಲಕ ಇಂಡಿಯಾಗೆ ಭದ್ರ ಬುನಾದಿ ಹಾಕಿದರು.

ಕೆಎಲ್‌ ರಾಹುಲ್‌ 77(176) ರನ್‌ಗಳಿಗೆ ತಮ್ಮ ಇನ್ನಿಂಗ್ಸ್‌ ಮುಗಿಸಿದರು. ನಂತರ ಜೈಸ್ವಾಲ್‌ ಜೊತೆಗೂಡಿದ ವಿರಾಟ್‌ ಅಬ್ಬರದ ಬ್ಯಾಟಿಂಗ್‌ನಿಂದ ದಾಖಲೆಯ ಶತಕ 100(143) ಪೂರೈಸಿ ಅಜೇಯರಾಗಿ ಉಳಿದರೆ, ಜೈಸ್ವಾಲ್‌ 161(297) ರನ್‌ಗೆ ಔಟಾದರು.

ತಂಡದ ಮೊತ್ತ 6 ವಿಕೆಟ್‌ಗೆ 487ರನ್‌ ಗಳಿಸಿದಾಗ ಟೀಂ ಇಂಡಿಯಾದ ನಾಯಕ ಡಿಕ್ಲೇರ್ ಮಾಡಿಕೊಂಡು 534 ರನ್‌ಗಳ ಬೃಹತ್‌ ಮೊತ್ತದ ಗುರಿ ಎದುರಾಳಿಗೆ ನೀಡಿದರು. ಮೂರನೇ ದಿನದಾಂತ್ಯದಲ್ಲಿ ಬ್ಯಾಟಿಂಗ್‌ ಆರಂಭಿಸಿದ ಅತಿಥೇಯ ತಂಡವು 12 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.

ಒತ್ತಡದಲ್ಲೇ ನಾಲ್ಕನೇ ದಿನ ಆರಂಭಿಸಿದ ಆಸ್ಟ್ರೇಲಿಯಾ ತಂಡವು 238 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಭಾರತದ ಎದುರು 295 ರನ್‌ಗಳ ಸೋಲೊಪ್ಪಿಕೊಂಡಿತು.

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌ (89 ರನ್)‌, ಮಿಚೆಲ್‌ ಮಾರ್ಷ್(‌47ರನ್)‌, ಮತ್ತು ಅಲೆಕ್ಸ್‌ ಕ್ಯಾರಿ (36ರನ್)‌ ಹೋರಾಟ ನಡೆಸಿದರು ಸೋಲು ತಪ್ಪಿಸಲು ಆಗಲಿಲ್ಲ.

ಮತ್ತೆ ಮಿಂಚಿದ ಬುಮ್ರಾ ಹಾಗೂ ಸಿರಾಜ್‌ 3 ವಿಕೆಟ್‌ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌ ಹಾಗೂ ಹರ್ಷಿತ್‌ ರಾಣಾ ನಿತೀಶ್‌ ರೆಡ್ಡಿ ತಲಾ ಒಂದು ವಿಕೆಟ್‌ ಪಡೆದರು.

ನಾಯಕ ಜಸ್ಪ್ರೀತ್‌ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

9 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

11 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

12 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

14 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

15 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

19 hours ago