ಕ್ರೀಡೆ

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ ಜಯ ಸಾಧಿಸಿದೆ. ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು 23 ರನ್‌ಗಳಿಂದ ಸೋಲಿಸುವ ಮೂಲಕ ಜಿಂಬಾಬ್ವೆಯು ಟೂರ್ನಿಯ ಮೊದಲ ದೊಡ್ಡ ಗೆಲುವು ಸೃಷ್ಟಿಸಿದೆ.

ಶ್ರೀಲಂಕಾದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಜಿಂಬಾಬ್ವೆಯ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. 20 ಓವರ್‌ಗಳಲ್ಲಿ 2 ವಿಕೆಟ್‌ಗೆ 169 ರನ್‌ಗಳ ಗಟ್ಟಿ ಮೊತ್ತ ಕಲೆಹಾಕಿದರು. ಬ್ರಯಾನ್ ಬೆನೆಟ್ ಅವರು 64 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡಕ್ಕೆ ಆಧಾರ ಸ್ತಂಭರಾದರು.

ಈ ಬೃಹತ್‌ ಮೊತ್ತ ಚೇಸ್ ಮಾಡಿದ ಆಸ್ಟ್ರೇಲಿಯಾ ಆರಂಭದಲ್ಲೇ ಕುಸಿಯಿತು. ಪವರ್‌ಪ್ಲೇಯಲ್ಲೇ 4 ವಿಕೆಟ್‌ಗಳನ್ನು ಕಳೆದುಕೊಂಡು 29 ರನ್‌ಗಳಿಗೆ ಸೀಮಿತವಾಯಿತು. ಮ್ಯಾಟ್ ರೆನ್‌ಶಾ ಅವರು 65 ರನ್‌ಗಳೊಂದಿಗೆ ಹೋರಾಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. 19.3 ಓವರ್‌ಗಳಲ್ಲಿ ಆಸ್ಟ್ರೇಲಿಯಾ 146 ರನ್‌ಗಳಿಗೆ ಆಲ್‌ಔಟ್ ಆಯಿತು.

ಜಿಂಬಾಬ್ವೆಯ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಬ್ಲೆಸಿಂಗ್ ಮುಝರಬಾನಿ ಅವರು 4 ವಿಕೆಟ್‌ಗಳನ್ನು ಪಡೆದು (4-17) ಮ್ಯಾಚ್‌ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಗಳಿಸಿದರು. ಬ್ರಾಡ್ ಎವಾನ್ಸ್ 3-23 ರನ್‌ಗಳೊಂದಿಗೆ 3 ವಿಕೆಟ್‌ಗಳನ್ನು ತೆಗೆದುಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago