ರಾವಲ್ಪಿಂಡಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಮಳೆಯಿಂದ ರದ್ದಾಗಿದೆ.
ಇಂದು ರಾವಲ್ಪಿಂಡಿಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಾದ ಈ ಪಂದ್ಯಕ್ಕೆ ಆರಂಭದಿಂದಲೇ ಮಳೆ ಅವಕಾಶ ಕೊಡಲಿಲ್ಲ. ಮೂರು ಗಂಟೆಗೂ ಹೆಚ್ಚು ಕಾಲ ಬಿಡದೇ ಸುರಿದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಇದರೊಂದಿಗೆ ಎರಡು ತಂಡಗಳು ತಲಾ ಒಂದು ಅಂಕ ಪಡೆಯುವ ಮೂಲಕ ಒಟ್ಟು 3 ಅಂಕ ಸಂಪಾದಿಸಿದ್ದಾರೆ. ರನ್ರೇಟ್ನಲ್ಲಿ ದಕ್ಷಿಣ ಆಫ್ರಿಕಾ ಹೆಚ್ಚಿರುವ ಕಾರಣ ಮೊದಲ ಸ್ಥಾನದಲ್ಲಿದೆ.
ಈ ಪಂದ್ಯ ರದ್ದಾಗಿರುವುದರಿಂದ ನಾಳೆ ನಡೆಯುವ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಸೆಣಸಾಟ ನಾಕೌಟ್ ಪಂದ್ಯವಾಗಿ ಮಾರ್ಪಟ್ಟಿದೆ. ಈ ಪಂದ್ಯದಲ್ಲಿ ಸೋತವರು ಐಸಿಸಿ ಚಾಂಪಿಯನ್ಸ್ಶಿಪ್ನಿಂದ ಹೊರಹೋಗುತ್ತಾರೆ.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…