ಕ್ರೀಡೆ

ಮತ್ತೆ ತಂಡಕ್ಕೆ ಮರಳಿದ ಜೋಶ್‌; ಮೂರನೇ ಟೆಸ್ಟ್‌ಗೆ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಬ್ರಿಸ್ಬೇನ್:‌ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್‌- ಗವಾಸ್ಕರ್ ಟ್ರೋಫಿ ಸರಣಿಯ 3 ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.14) ಬ್ರಿಸ್ಬೇನ್‌ನ ಗಬ್ಬಾ ಕ್ರಿಡಾಂಗಣದಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌‌ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯದಲ್ಲಿ ಆಡುವ 11 ಆಟಗಾರರ ಹೆಸರನ್ನು ತಿಳಿಸಿದ್ದಾರೆ.

ಮೊದಲ ಟೆಸ್ಟ್‌ ಪಂದ್ಯದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಜೋಶ್‌ ಹ್ಯಾಜಲ್‌ವುಡ್‌ ಈಗ ಸಂಪೂರ್ಣವಾಗಿ ಫಿಟ್‌ ಆಗಿದ್ದು ಈ ಪಂದ್ಯದಲ್ಲಿ ಕಣಕ್ಕಳಿಯಲಿದ್ದಾರೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ಮಾಹಿತಿ ನೀಡಿದ್ದಾರೆ.

ಜೋಶ್‌ ಹ್ಯಾಜಲ್‌ವುಡ್‌ ಗೈರಿನಲ್ಲಿ ಎರಡನೇ ಟೆಸ್ಟ್‌ ಪಂದ್ಯ ಆಡಿ ಮಿಂಚಿದ ಸ್ಕಾಟ್‌ ಬೋಲ್ಯಾಂಡ್‌ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.

5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಎರಡೂ ತಂಡಗಳು ಒಂದೊಂದು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಿವೆ. ಆದ ಕಾರಣ ಈ ಪಂದ್ಯವು ತುಂಬಾ ಕುತೂಹಲ ಕೆರಳಿಸಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ 11: ಉಸ್ಮಾನ್‌ ಖ್ವಾಜಾ, ನೇಥನ್‌ ಮೆಕ್‌ಸ್ವೀನಿ, ಮಾರ್ನಲ್‌ ಲಾಬುಷೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನೇಥನ್‌ ಲಯನ್‌, ಜೋಶ್‌ ಹ್ಯಾಜಲ್‌ವುಡ್‌.

andolana

Recent Posts

ಪಂಜಾಬ್ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

ಹೈದರಾಬಾದ್‌: ಅಭಿಷೇಕ್‌ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್‌ ಹೆಡ್‌ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 245…

4 hours ago

ಮೈಸೂರು| ಕಾರಿನ ಟೈರ್‌ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಟಗಳ್ಳಿಯ ಆರ್‌ಬಿಐ…

4 hours ago

ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲೂ ಕಂಬಳ ಆಯೋಜನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ…

5 hours ago

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ…

5 hours ago

ಕೇಂದ್ರದ ತಪ್ಪು ನೀತಿಗಳಿಂದಲೇ ಬೆಲೆ ಏರಿಕೆಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ…

6 hours ago

ವ್ಯಕ್ತಿಯೋರ್ವ ಮಲೆಮಹದೇಶ್ವರ ಸ್ವಾಮಿ ದೇವಾಲಯ ಏರಿ ಆತ್ಮಹತ್ಯೆಗೆ ಯತ್ನ

ಹನೂರು:  ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ‌ ಮಲೆಮಹದೇಶ್ವರ ಬೆಟ್ಟದ‌ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ…

6 hours ago