ಕ್ರೀಡೆ

ಮತ್ತೆ ತಂಡಕ್ಕೆ ಮರಳಿದ ಜೋಶ್‌; ಮೂರನೇ ಟೆಸ್ಟ್‌ಗೆ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಬ್ರಿಸ್ಬೇನ್:‌ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್‌- ಗವಾಸ್ಕರ್ ಟ್ರೋಫಿ ಸರಣಿಯ 3 ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.14) ಬ್ರಿಸ್ಬೇನ್‌ನ ಗಬ್ಬಾ ಕ್ರಿಡಾಂಗಣದಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌‌ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯದಲ್ಲಿ ಆಡುವ 11 ಆಟಗಾರರ ಹೆಸರನ್ನು ತಿಳಿಸಿದ್ದಾರೆ.

ಮೊದಲ ಟೆಸ್ಟ್‌ ಪಂದ್ಯದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಜೋಶ್‌ ಹ್ಯಾಜಲ್‌ವುಡ್‌ ಈಗ ಸಂಪೂರ್ಣವಾಗಿ ಫಿಟ್‌ ಆಗಿದ್ದು ಈ ಪಂದ್ಯದಲ್ಲಿ ಕಣಕ್ಕಳಿಯಲಿದ್ದಾರೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ಮಾಹಿತಿ ನೀಡಿದ್ದಾರೆ.

ಜೋಶ್‌ ಹ್ಯಾಜಲ್‌ವುಡ್‌ ಗೈರಿನಲ್ಲಿ ಎರಡನೇ ಟೆಸ್ಟ್‌ ಪಂದ್ಯ ಆಡಿ ಮಿಂಚಿದ ಸ್ಕಾಟ್‌ ಬೋಲ್ಯಾಂಡ್‌ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.

5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಎರಡೂ ತಂಡಗಳು ಒಂದೊಂದು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಿವೆ. ಆದ ಕಾರಣ ಈ ಪಂದ್ಯವು ತುಂಬಾ ಕುತೂಹಲ ಕೆರಳಿಸಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ 11: ಉಸ್ಮಾನ್‌ ಖ್ವಾಜಾ, ನೇಥನ್‌ ಮೆಕ್‌ಸ್ವೀನಿ, ಮಾರ್ನಲ್‌ ಲಾಬುಷೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನೇಥನ್‌ ಲಯನ್‌, ಜೋಶ್‌ ಹ್ಯಾಜಲ್‌ವುಡ್‌.

andolana

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

43 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

1 hour ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

1 hour ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

6 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago