ಕ್ರೀಡೆ

ದಾಖಲೆಯ ಮೊತ್ತ ಬೆನ್ನತ್ತಿ ಗೆದ್ದ ಆಸ್ಟ್ರೇಲಿಯಾ

ಲಾಹೋರ್‌: ಮಧ್ಯಮ ಕ್ರಮಾಂಕದ ಬ್ಯಾಟರ್‌ ಜೋಶ್‌ ಇಂಗ್ಲಿಸ್‌ ಅವರ ಭರ್ಜರಿ ಶತಕದ ನೆರವಿನಿಂದ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಇತಿಹಾಸದಲ್ಲಿ ದಾಖಲೆಯ ಮೊತ್ತ ಬೆನ್ನತ್ತಿ ಗೆದ್ದ ಹೆಗ್ಗಳಿಕೆಗೆ ಆಸ್ಟ್ರೇಲಿಯಾ ತಂಡ ಪಾತ್ರವಾಗಿದೆ.

ಲಾಹೋರ್‌ನ ಗಢಾಫಿ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್‌ ಸ್ಮಿತ್‌ ಫಿಲ್ಡಿಂಗ್‌ ಆಯ್ಕೆ ಮಾಡಿ, ಎದುರಾಳಿ ಇಂಗ್ಲೆಂಡ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

ಇಂಗ್ಲೆಂಡ್‌ನ ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ 10(6) ಹಾಗೂ ಜಾಮೀ ಸ್ಮಿತ್‌ 15(13) ವಿಕೆಟ್‌ ಪತನದ ನಡುವೆಯೂ ಸೊಗಸಾದ ಆಟವಾಡಿದ ಬೆನ್‌ ಡಕೆಟ್‌ 165(143) ಶತಕ ಹಾಗೂ ಹಾಗೂ ಜೋ ರೂಟ್‌ 68(78) ಅವರ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್‌ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 351 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು.

ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಜೋಶ್‌ ಇಂಗ್ಲಿಸ್‌ನ ಭರ್ಜರಿ ಶತಕದ ನೆರವಿನೊಂದಿಗೆ 47.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 356 ರನ್‌ ಸಿಡಿಸಿ ಐತಿಹಾಸಿಕ ಭರ್ಜರಿ ಜಯ ಸಾಧಿಸಿತು.

ಎರಡು ವಿಕೆಟ್‌ ಬೇಗನೇ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ ತಂಡಕ್ಕೆ ಆರಂಭಿಕ ಬ್ಯಾಟರ್‌ ಮ್ಯಾಥ್ಯೂ ಶಾರ್ಟ್‌ 63(66) ಹಾಗೂ ಮಾರ್ನಸ್‌ ಲಾಬುಶೇನ್‌ 47(45) ಜೊತೆಗೂಡಿ 95 ರನ್‌ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

ಇವರ ವಿಕೆಟ್‌ ನಂತರ ಇಂಗ್ಲಿಸ್‌ ಜೊತೆ ಗೂಡಿದ ಅಲೆಕ್ಸ್‌ ಕ್ಯಾರಿ 69(63) ಅರ್ಧಶತಕದ ಕಾಣಿಕೆ ನೀಡಿ ಕಾರ್ಸ್‌ ಬೌಲಿಂಗ್‌ನಲ್ಲಿ ಬಟ್ಲರ್‌ಗೆ ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿದರು. ಅಂತಿಮವಾಗಿ ಇಂಗ್ಲಿಸ್‌ ಜೊತೆಗೂಡಿದ ಮ್ಯಾಕ್ಸವೆಲ್‌ 32(15) ತಂಡವನ್ನು ಗೆಲುವಿನ ದಡ ಸೇರಿಸಿದರು.

ಸಂಕ್ಷೀಪ್ತ ಸ್ಕೋರ್:

ಇಂಗ್ಲೆಂಡ್‌: 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 351 ( ಬೆನ್‌ ಡಕೆಟ್‌ 165, ಜೋ ರೂಟ್‌ 68, ಜೋಶ್‌ ಬಟ್ಲರ್‌ 23, ಜೋಫ್ರಾ ಆರ್ಚರ್‌ ಔಟಾಗದೇ 21; ಬೆನ್‌ ಡ್ವಾರಸಿಸ್‌ 66ಕ್ಕೆ3, ಜಂಪಾ 64ಕ್ಕೆ2, ಲಾಬುಶೇನ್‌ 41ಕ್ಕೆ 2);

ಆಸ್ಟ್ರೇಲಿಯಾ: 47.3 ಓವರ್‌ಗಳಲ್ಲಿ 5 ವಿಕೆಟ್‌ಗೆ 356 (ಮ್ಯಾಥ್ಯೂ ಶಾರ್ಟ್‌ 63, ಮಾರ್ನಸ್‌ ಲಾಬುಷೇನ್‌ 47, ಜೋಶ್‌ ಇಂಗ್ಲಿಸ್‌ 120, ಅಲೆಕ್ಸ್‌ ಕ್ಯಾರಿ 69, ಗ್ಲೆನ್‌ ಮ್ಯಾಕ್ಸವೆಲ್‌ ಔಟಾಗದೇ 32 ಅದಿಲ್‌ ರಶೀದ್‌ 47ಕ್ಕೆ1, ಲಿವಿಂಗ್‌ ಸ್ಟೋನ್‌ 47ಕ್ಕೆ1);

ಪಂದ್ಯದ ಆಟಗಾರ: ಜೋಶ್‌ ಇಂಗ್ಲಿಸ್‌

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

1 hour ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

2 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

2 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

2 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

2 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

2 hours ago