ಕ್ರೀಡೆ

ದಾಖಲೆಯ ಮೊತ್ತ ಬೆನ್ನತ್ತಿ ಗೆದ್ದ ಆಸ್ಟ್ರೇಲಿಯಾ

ಲಾಹೋರ್‌: ಮಧ್ಯಮ ಕ್ರಮಾಂಕದ ಬ್ಯಾಟರ್‌ ಜೋಶ್‌ ಇಂಗ್ಲಿಸ್‌ ಅವರ ಭರ್ಜರಿ ಶತಕದ ನೆರವಿನಿಂದ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಇತಿಹಾಸದಲ್ಲಿ ದಾಖಲೆಯ ಮೊತ್ತ ಬೆನ್ನತ್ತಿ ಗೆದ್ದ ಹೆಗ್ಗಳಿಕೆಗೆ ಆಸ್ಟ್ರೇಲಿಯಾ ತಂಡ ಪಾತ್ರವಾಗಿದೆ.

ಲಾಹೋರ್‌ನ ಗಢಾಫಿ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್‌ ಸ್ಮಿತ್‌ ಫಿಲ್ಡಿಂಗ್‌ ಆಯ್ಕೆ ಮಾಡಿ, ಎದುರಾಳಿ ಇಂಗ್ಲೆಂಡ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

ಇಂಗ್ಲೆಂಡ್‌ನ ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ 10(6) ಹಾಗೂ ಜಾಮೀ ಸ್ಮಿತ್‌ 15(13) ವಿಕೆಟ್‌ ಪತನದ ನಡುವೆಯೂ ಸೊಗಸಾದ ಆಟವಾಡಿದ ಬೆನ್‌ ಡಕೆಟ್‌ 165(143) ಶತಕ ಹಾಗೂ ಹಾಗೂ ಜೋ ರೂಟ್‌ 68(78) ಅವರ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್‌ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 351 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು.

ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಜೋಶ್‌ ಇಂಗ್ಲಿಸ್‌ನ ಭರ್ಜರಿ ಶತಕದ ನೆರವಿನೊಂದಿಗೆ 47.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 356 ರನ್‌ ಸಿಡಿಸಿ ಐತಿಹಾಸಿಕ ಭರ್ಜರಿ ಜಯ ಸಾಧಿಸಿತು.

ಎರಡು ವಿಕೆಟ್‌ ಬೇಗನೇ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ ತಂಡಕ್ಕೆ ಆರಂಭಿಕ ಬ್ಯಾಟರ್‌ ಮ್ಯಾಥ್ಯೂ ಶಾರ್ಟ್‌ 63(66) ಹಾಗೂ ಮಾರ್ನಸ್‌ ಲಾಬುಶೇನ್‌ 47(45) ಜೊತೆಗೂಡಿ 95 ರನ್‌ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

ಇವರ ವಿಕೆಟ್‌ ನಂತರ ಇಂಗ್ಲಿಸ್‌ ಜೊತೆ ಗೂಡಿದ ಅಲೆಕ್ಸ್‌ ಕ್ಯಾರಿ 69(63) ಅರ್ಧಶತಕದ ಕಾಣಿಕೆ ನೀಡಿ ಕಾರ್ಸ್‌ ಬೌಲಿಂಗ್‌ನಲ್ಲಿ ಬಟ್ಲರ್‌ಗೆ ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿದರು. ಅಂತಿಮವಾಗಿ ಇಂಗ್ಲಿಸ್‌ ಜೊತೆಗೂಡಿದ ಮ್ಯಾಕ್ಸವೆಲ್‌ 32(15) ತಂಡವನ್ನು ಗೆಲುವಿನ ದಡ ಸೇರಿಸಿದರು.

ಸಂಕ್ಷೀಪ್ತ ಸ್ಕೋರ್:

ಇಂಗ್ಲೆಂಡ್‌: 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 351 ( ಬೆನ್‌ ಡಕೆಟ್‌ 165, ಜೋ ರೂಟ್‌ 68, ಜೋಶ್‌ ಬಟ್ಲರ್‌ 23, ಜೋಫ್ರಾ ಆರ್ಚರ್‌ ಔಟಾಗದೇ 21; ಬೆನ್‌ ಡ್ವಾರಸಿಸ್‌ 66ಕ್ಕೆ3, ಜಂಪಾ 64ಕ್ಕೆ2, ಲಾಬುಶೇನ್‌ 41ಕ್ಕೆ 2);

ಆಸ್ಟ್ರೇಲಿಯಾ: 47.3 ಓವರ್‌ಗಳಲ್ಲಿ 5 ವಿಕೆಟ್‌ಗೆ 356 (ಮ್ಯಾಥ್ಯೂ ಶಾರ್ಟ್‌ 63, ಮಾರ್ನಸ್‌ ಲಾಬುಷೇನ್‌ 47, ಜೋಶ್‌ ಇಂಗ್ಲಿಸ್‌ 120, ಅಲೆಕ್ಸ್‌ ಕ್ಯಾರಿ 69, ಗ್ಲೆನ್‌ ಮ್ಯಾಕ್ಸವೆಲ್‌ ಔಟಾಗದೇ 32 ಅದಿಲ್‌ ರಶೀದ್‌ 47ಕ್ಕೆ1, ಲಿವಿಂಗ್‌ ಸ್ಟೋನ್‌ 47ಕ್ಕೆ1);

ಪಂದ್ಯದ ಆಟಗಾರ: ಜೋಶ್‌ ಇಂಗ್ಲಿಸ್‌

ಆಂದೋಲನ ಡೆಸ್ಕ್

Recent Posts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

23 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

35 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

41 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

45 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

47 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

49 mins ago