ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ.
ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಾರ್ನಸ್ ಲ್ಯಾಬುಶೇನ್ ಗೆ 15 ಸದಸ್ಯರ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಬಿಗ್-ಹಿಟ್ಟಿಂಗ್ ಮಧ್ಯಮ ಕ್ರಮಾಂಕದ ಬ್ಯಾಟರ್ ಟಿಮ್ ಡೇವಿಡ್ ಕೂಡ ಪಟ್ಟಿಯಲ್ಲಿ ಸ್ಥಾನವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.
ಆಸ್ಟ್ರೇಲಿಯ ಈ ಹಿಂದೆ ಪ್ರಕಟಿಸಿದ್ದ 18 ಸದಸ್ಯರ ಪ್ರಾಥಮಿಕ ತಂಡದಲ್ಲಿದ್ದ ಆಲ್ರೌಂಡರ್ ಆ್ಯರೋನ್ ಹಾರ್ಡಿ, ವೇಗಿ ನಥಾನ್ ಎಲ್ಲಿಸ್ ಹಾಗೂ ಯುವ ಸ್ಪಿನ್ನರ್ ತನ್ವೀರ್ ಸಂಘ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಬ್ಯಾಕ್-ಅಪ್ ವೇಗಿಯಾಗಿ ನಥಾನ್ ಎಲ್ಲಿಸ್ ಗಿಂತ ವೇಗಿ ಸೀನ್ ಅಬಾಟ್ ಗೆ ಆದ್ಯತೆ ನೀಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಸ್ಪಿನ್ನರ್ ಗಳಾದ ಆ್ಯಶ್ಟನ್ ಅಗರ್ ಮತ್ತು ಆಡಮ್ ಝಂಪಾಗೆ ಆಯ್ಕೆದಾರರಿಂದ ಅನುಮೋದನೆ ಸಿಕ್ಕಿದೆ.
ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ಗಳಾಗಿದ್ದಾರೆ.
ಆಸ್ಟ್ರೇಲಿಯಾ ವಿಶ್ವಕಪ್ ತಂಡ:
ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆ್ಯಶ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಝಲ್ ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆ್ಯಡಮ್ ಝಾಂಪ, ಮಿಚೆಲ್ ಸ್ಟಾರ್ಕ್
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…