ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ.
ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಾರ್ನಸ್ ಲ್ಯಾಬುಶೇನ್ ಗೆ 15 ಸದಸ್ಯರ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಬಿಗ್-ಹಿಟ್ಟಿಂಗ್ ಮಧ್ಯಮ ಕ್ರಮಾಂಕದ ಬ್ಯಾಟರ್ ಟಿಮ್ ಡೇವಿಡ್ ಕೂಡ ಪಟ್ಟಿಯಲ್ಲಿ ಸ್ಥಾನವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.
ಆಸ್ಟ್ರೇಲಿಯ ಈ ಹಿಂದೆ ಪ್ರಕಟಿಸಿದ್ದ 18 ಸದಸ್ಯರ ಪ್ರಾಥಮಿಕ ತಂಡದಲ್ಲಿದ್ದ ಆಲ್ರೌಂಡರ್ ಆ್ಯರೋನ್ ಹಾರ್ಡಿ, ವೇಗಿ ನಥಾನ್ ಎಲ್ಲಿಸ್ ಹಾಗೂ ಯುವ ಸ್ಪಿನ್ನರ್ ತನ್ವೀರ್ ಸಂಘ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಬ್ಯಾಕ್-ಅಪ್ ವೇಗಿಯಾಗಿ ನಥಾನ್ ಎಲ್ಲಿಸ್ ಗಿಂತ ವೇಗಿ ಸೀನ್ ಅಬಾಟ್ ಗೆ ಆದ್ಯತೆ ನೀಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಸ್ಪಿನ್ನರ್ ಗಳಾದ ಆ್ಯಶ್ಟನ್ ಅಗರ್ ಮತ್ತು ಆಡಮ್ ಝಂಪಾಗೆ ಆಯ್ಕೆದಾರರಿಂದ ಅನುಮೋದನೆ ಸಿಕ್ಕಿದೆ.
ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ಗಳಾಗಿದ್ದಾರೆ.
ಆಸ್ಟ್ರೇಲಿಯಾ ವಿಶ್ವಕಪ್ ತಂಡ:
ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆ್ಯಶ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಝಲ್ ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆ್ಯಡಮ್ ಝಾಂಪ, ಮಿಚೆಲ್ ಸ್ಟಾರ್ಕ್
ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…