ಕ್ರೀಡೆ

ಏಕದಿನ ವಿಶ್ವಕಪ್ ಗೆ ಆಸ್ಟ್ರೇಲಿಯ ತಂಡ ಪ್ರಕಟ: ಲ್ಯಾಬುಶೇನ್‌ ಔಟ್‌

ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ.

ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಾರ್ನಸ್ ಲ್ಯಾಬುಶೇನ್ ಗೆ 15 ಸದಸ್ಯರ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಬಿಗ್-ಹಿಟ್ಟಿಂಗ್ ಮಧ್ಯಮ ಕ್ರಮಾಂಕದ ಬ್ಯಾಟರ್ ಟಿಮ್ ಡೇವಿಡ್ ಕೂಡ ಪಟ್ಟಿಯಲ್ಲಿ ಸ್ಥಾನವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.

ಆಸ್ಟ್ರೇಲಿಯ ಈ ಹಿಂದೆ ಪ್ರಕಟಿಸಿದ್ದ 18 ಸದಸ್ಯರ ಪ್ರಾಥಮಿಕ ತಂಡದಲ್ಲಿದ್ದ ಆಲ್ರೌಂಡರ್ ಆ್ಯರೋನ್ ಹಾರ್ಡಿ, ವೇಗಿ ನಥಾನ್ ಎಲ್ಲಿಸ್ ಹಾಗೂ ಯುವ ಸ್ಪಿನ್ನರ್ ತನ್ವೀರ್ ಸಂಘ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಬ್ಯಾಕ್-ಅಪ್ ವೇಗಿಯಾಗಿ ನಥಾನ್ ಎಲ್ಲಿಸ್ ಗಿಂತ ವೇಗಿ ಸೀನ್ ಅಬಾಟ್ ಗೆ ಆದ್ಯತೆ ನೀಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಸ್ಪಿನ್ನರ್ ಗಳಾದ ಆ್ಯಶ್ಟನ್ ಅಗರ್ ಮತ್ತು ಆಡಮ್ ಝಂಪಾಗೆ ಆಯ್ಕೆದಾರರಿಂದ ಅನುಮೋದನೆ ಸಿಕ್ಕಿದೆ.

ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ಗಳಾಗಿದ್ದಾರೆ.

ಆಸ್ಟ್ರೇಲಿಯಾ ವಿಶ್ವಕಪ್ ತಂಡ:

ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆ್ಯಶ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಝಲ್ ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆ್ಯಡಮ್ ಝಾಂಪ, ಮಿಚೆಲ್ ಸ್ಟಾರ್ಕ್

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

9 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

9 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

10 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

10 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

11 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

11 hours ago