ಕ್ರೀಡೆ

ಏಕದಿನ ವಿಶ್ವಕಪ್ ಗೆ ಆಸ್ಟ್ರೇಲಿಯ ತಂಡ ಪ್ರಕಟ: ಲ್ಯಾಬುಶೇನ್‌ ಔಟ್‌

ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ.

ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಾರ್ನಸ್ ಲ್ಯಾಬುಶೇನ್ ಗೆ 15 ಸದಸ್ಯರ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಬಿಗ್-ಹಿಟ್ಟಿಂಗ್ ಮಧ್ಯಮ ಕ್ರಮಾಂಕದ ಬ್ಯಾಟರ್ ಟಿಮ್ ಡೇವಿಡ್ ಕೂಡ ಪಟ್ಟಿಯಲ್ಲಿ ಸ್ಥಾನವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.

ಆಸ್ಟ್ರೇಲಿಯ ಈ ಹಿಂದೆ ಪ್ರಕಟಿಸಿದ್ದ 18 ಸದಸ್ಯರ ಪ್ರಾಥಮಿಕ ತಂಡದಲ್ಲಿದ್ದ ಆಲ್ರೌಂಡರ್ ಆ್ಯರೋನ್ ಹಾರ್ಡಿ, ವೇಗಿ ನಥಾನ್ ಎಲ್ಲಿಸ್ ಹಾಗೂ ಯುವ ಸ್ಪಿನ್ನರ್ ತನ್ವೀರ್ ಸಂಘ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಬ್ಯಾಕ್-ಅಪ್ ವೇಗಿಯಾಗಿ ನಥಾನ್ ಎಲ್ಲಿಸ್ ಗಿಂತ ವೇಗಿ ಸೀನ್ ಅಬಾಟ್ ಗೆ ಆದ್ಯತೆ ನೀಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಸ್ಪಿನ್ನರ್ ಗಳಾದ ಆ್ಯಶ್ಟನ್ ಅಗರ್ ಮತ್ತು ಆಡಮ್ ಝಂಪಾಗೆ ಆಯ್ಕೆದಾರರಿಂದ ಅನುಮೋದನೆ ಸಿಕ್ಕಿದೆ.

ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ಗಳಾಗಿದ್ದಾರೆ.

ಆಸ್ಟ್ರೇಲಿಯಾ ವಿಶ್ವಕಪ್ ತಂಡ:

ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆ್ಯಶ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಝಲ್ ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆ್ಯಡಮ್ ಝಾಂಪ, ಮಿಚೆಲ್ ಸ್ಟಾರ್ಕ್

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago