ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ.
ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಾರ್ನಸ್ ಲ್ಯಾಬುಶೇನ್ ಗೆ 15 ಸದಸ್ಯರ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಬಿಗ್-ಹಿಟ್ಟಿಂಗ್ ಮಧ್ಯಮ ಕ್ರಮಾಂಕದ ಬ್ಯಾಟರ್ ಟಿಮ್ ಡೇವಿಡ್ ಕೂಡ ಪಟ್ಟಿಯಲ್ಲಿ ಸ್ಥಾನವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.
ಆಸ್ಟ್ರೇಲಿಯ ಈ ಹಿಂದೆ ಪ್ರಕಟಿಸಿದ್ದ 18 ಸದಸ್ಯರ ಪ್ರಾಥಮಿಕ ತಂಡದಲ್ಲಿದ್ದ ಆಲ್ರೌಂಡರ್ ಆ್ಯರೋನ್ ಹಾರ್ಡಿ, ವೇಗಿ ನಥಾನ್ ಎಲ್ಲಿಸ್ ಹಾಗೂ ಯುವ ಸ್ಪಿನ್ನರ್ ತನ್ವೀರ್ ಸಂಘ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಬ್ಯಾಕ್-ಅಪ್ ವೇಗಿಯಾಗಿ ನಥಾನ್ ಎಲ್ಲಿಸ್ ಗಿಂತ ವೇಗಿ ಸೀನ್ ಅಬಾಟ್ ಗೆ ಆದ್ಯತೆ ನೀಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಸ್ಪಿನ್ನರ್ ಗಳಾದ ಆ್ಯಶ್ಟನ್ ಅಗರ್ ಮತ್ತು ಆಡಮ್ ಝಂಪಾಗೆ ಆಯ್ಕೆದಾರರಿಂದ ಅನುಮೋದನೆ ಸಿಕ್ಕಿದೆ.
ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ಗಳಾಗಿದ್ದಾರೆ.
ಆಸ್ಟ್ರೇಲಿಯಾ ವಿಶ್ವಕಪ್ ತಂಡ:
ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆ್ಯಶ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಝಲ್ ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆ್ಯಡಮ್ ಝಾಂಪ, ಮಿಚೆಲ್ ಸ್ಟಾರ್ಕ್
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…