ಕ್ರೀಡೆ

ಆಸ್ಪ್ರೇಲಿಯಾ ಔಟ್: ಸೆಮಿ ಫೈನಲ್ ಗೆ ಲಗ್ಗೆಇಟ್ಟ ಇಂಗ್ಲೆಂಡ್.

ಆಸ್ಟ್ರೇಲಿಯಾ :  ಟಿ 20 ವಿಶ್ವಕಪ್ ನಲ್ಲಿ ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಇಂಗ್ಲೆಂಡ್ ಜಯಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಈ ಮೂಲಕ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ. ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್​ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಆಸ್ಟ್ರೇಲಿಯಾ ಕನಸು ಭಗ್ನಗೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 141 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 19.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 144 ರನ್ ಬಾರಿಸುವ ಮೂಲಕ ಜಯ ಸಾಧಿಸಿತು.

2ನೇ ಗುಂಪಿನಲ್ಲಿ ಸೆಮಿಫೈನಲ್ ಗೆ ಯಾವುದೇ ತಂಡ ಖಚಿತವಾಗಿಲ್ಲ. 2 ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಮಿಫೈನಲ್ ನ ರೇಸ್ ನಲ್ಲಿವೆ. ನಾಳೆ ನಡೆಯುವ ಪಂದ್ಯಗಳಲ್ಲಿ ನಿರ್ಧಾರವಾಗಲಿದೆ.“

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

4 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago