ಮೆಲ್ಬೋರ್ನ್: ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಹಾಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಒಟಿಐ ಸರಣಿಗಳಿಗೆ 18 ಸದಸ್ಯರ ಆಸ್ಟ್ರೇಲಿಯಾ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಎಂದಿನಂತೆ ವೇಗಿ ಪ್ಯಾಟ್ ಕಮಿನ್ಸ್ ಅವರು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.
ಕಳೆದ ಹಲವು ದಿನಗಳಿಂದ ಫಾರ್ಮ್ ಕಳೆದುಕೊಂಡಿರುವ ಪ್ರೀಮಿಯರ್ ಬ್ಯಾಟ್ಸ್ಮನ್ ಲಾಬುಶೇನ್ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡ, ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಎರಡು ಏಕದಿನ ಸರಣಿಗಳನ್ನು ಆಡಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡವನ್ನು 18 ರಿಂದ 15ಕ್ಕೆ ಇಳಿಸಲಾಗುತ್ತದೆ.
https://twitter.com/CricketAus/status/1688384862028521472?s=20
ಟಿ20 ವಿಶ್ವಕಪ್ ಹಾಗೂ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಗೆದ್ದು ಬೀಗುತ್ತಿರುವ ಆಸ್ಟ್ರೇಲಿಯಾ ತಂಡ, ಮತ್ತೊಂದು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗೆಲ್ಲಲು ಎದುರು ನೋಡುತ್ತಿದೆ. ಹಾಗಾಗಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡದಲ್ಲಿ ಅನುಭವಿಗಳ ಜೊತೆಗೆ ಕಿರಿಯ ಪ್ರತಿಭಾವಂತ ಆಟಗಾರರಿಗೂ ಅವಕಾಶ ನೀಡಲಾಗಿದೆ.
ಆಸ್ಟ್ರೇಲಿಯಾ ಬ್ಯಾಟಿಂಗ್ ವಿಭಾಗದಲ್ಲಿ ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಕಾಣಿಸಿಕೊಂಡಿದ್ದಾರೆ. ಯಾವುದೇ ಒತ್ತಡದ ಸಂದರ್ಭದಲ್ಲಿ ರನ್ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಇವರು ಗೆಲುವಿನ ದಡ ಸೇರಿಸಬಲ್ಲರು. ಇನ್ನು ಆಲ್ರೌಂಡರ್ಗಳಾಗಿ ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೋಯ್ನಿಸ್, ಗ್ಲೆನ್ ಮ್ಯಾಕ್ಸ್ವೆಲ್ ಆಯ್ಕೆಯಾಗಿದ್ದಾರೆ.
ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಹಾಗೂ ಜಾಶ್ ಹೇಝಲ್ವುಡ್ ಸ್ಥಾನ ಪಡೆದಿದ್ದಾರೆ. ತಮ್ಮ ವೇಗಿ, ಸ್ವಿಂಗ್ ಹಾಗೂ ಆಕ್ರಮಣದ ಮೂಲಕ ಎದುರಾಳಿ ಬ್ಯಾಟ್ಸ್ಮನ್ಗಳನ್ನು ಯಾವುದೇ ಸಮಯದಲ್ಲಿ ಇವರು ಕೆಡವಬಲ್ಲರು. ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಬೇಕೆಂದರೆ, ಇವರ ಪಾತ್ರ ತುಂಬಾ ಮುಖ್ಯ.
ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿರುವ ಆಡಂ ಝಾಂಪ ಹಾಗೂ ಅಷ್ಟನ್ ಎಗರ್ ಅವರು ಕೂಡ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮಧ್ಯಮ ಓವರ್ಗಳಲ್ಲಿ ರನ್ಗಳಿಗೆ ಕಡಿವಾಣ ಹಾಕಿ ವಿಕೆಟ್ಗಳನ್ನು ಪಡೆಯುವುದು ಇವರ ಕಾಯಕವಾಗಿದೆ.
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಅಷ್ಟನ್ ಎಗರ್, ಅಲೆಕ್ಸ್ ಕೇರಿ (ವಿ.ಕೀ), ನೇಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಆರೋನ್ ಹಾರ್ಡಿ, ಜಾಶ್ ಹೇಝಲ್ವುಡ್, ಟ್ರಾವಿಸ್ ಹೆಡ್, ಜಾಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಂಘ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಡಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಡೇವಿಡ್ ವಾರ್ನರ್, ಆಡಂ ಝಾಂಪ
ಸೆಪ್ಟಂಬರ್ 7 ರಿಂದ 27ರವರೆಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಆಸ್ಟ್ರೇಲಿಯಾ ತಂಡ ಏಕದಿನ ಸರಣಿಗಳನ್ನು ಆಡಲಿದೆ. ಇದಾದ ಬಳಿಕ ಅಕ್ಟೋಬರ್ ಹಾಗೂ ನವೆಂಬರ್ ಅವಧಿಯಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಆಡಲಿದೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…