ಕ್ರೀಡೆ

ಏಕದಿನ ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಮಾರ್ನಸ್‌ ಲಾಬುಶೇನ್‌ಗಿಲ್ಲ ತಂಡದಲ್ಲಿ ಸ್ಥಾನ.!

ಮೆಲ್ಬೋರ್ನ್‌: ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಹಾಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಒಟಿಐ ಸರಣಿಗಳಿಗೆ 18 ಸದಸ್ಯರ ಆಸ್ಟ್ರೇಲಿಯಾ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಎಂದಿನಂತೆ ವೇಗಿ ಪ್ಯಾಟ್‌ ಕಮಿನ್ಸ್ ಅವರು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.

ಕಳೆದ ಹಲವು ದಿನಗಳಿಂದ ಫಾರ್ಮ್‌ ಕಳೆದುಕೊಂಡಿರುವ ಪ್ರೀಮಿಯರ್‌ ಬ್ಯಾಟ್ಸ್‌ಮನ್‌ ಲಾಬುಶೇನ್‌ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್‌ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಏಕದಿನ ವಿಶ್ವಕಪ್‌ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡ, ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಎರಡು ಏಕದಿನ ಸರಣಿಗಳನ್ನು ಆಡಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು 18 ರಿಂದ 15ಕ್ಕೆ ಇಳಿಸಲಾಗುತ್ತದೆ.

https://twitter.com/CricketAus/status/1688384862028521472?s=20

ಟಿ20 ವಿಶ್ವಕಪ್‌ ಹಾಗೂ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಗೆದ್ದು ಬೀಗುತ್ತಿರುವ ಆಸ್ಟ್ರೇಲಿಯಾ ತಂಡ, ಮತ್ತೊಂದು ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಗೆಲ್ಲಲು ಎದುರು ನೋಡುತ್ತಿದೆ. ಹಾಗಾಗಿ ಪ್ಯಾಟ್‌ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡದಲ್ಲಿ ಅನುಭವಿಗಳ ಜೊತೆಗೆ ಕಿರಿಯ ಪ್ರತಿಭಾವಂತ ಆಟಗಾರರಿಗೂ ಅವಕಾಶ ನೀಡಲಾಗಿದೆ.

ಆಸ್ಟ್ರೇಲಿಯಾ ಬ್ಯಾಟಿಂಗ್ ವಿಭಾಗದಲ್ಲಿ ಡೇವಿಡ್‌ ವಾರ್ನರ್‌, ಸ್ಟೀವನ್ ಸ್ಮಿತ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್ ಕಾಣಿಸಿಕೊಂಡಿದ್ದಾರೆ. ಯಾವುದೇ ಒತ್ತಡದ ಸಂದರ್ಭದಲ್ಲಿ ರನ್‌ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಇವರು ಗೆಲುವಿನ ದಡ ಸೇರಿಸಬಲ್ಲರು. ಇನ್ನು ಆಲ್‌ರೌಂಡರ್‌ಗಳಾಗಿ ಮಿಚೆಲ್‌ ಮಾರ್ಷ್‌, ಮಾರ್ಕಸ್‌ ಸ್ಟೋಯ್ನಿಸ್‌, ಗ್ಲೆನ್ ಮ್ಯಾಕ್ಸ್‌ವೆಲ್ ಆಯ್ಕೆಯಾಗಿದ್ದಾರೆ.

ಇನ್ನು ವೇಗದ ಬೌಲಿಂಗ್‌ ವಿಭಾಗದಲ್ಲಿ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಹಾಗೂ ಜಾಶ್‌ ಹೇಝಲ್‌ವುಡ್‌ ಸ್ಥಾನ ಪಡೆದಿದ್ದಾರೆ. ತಮ್ಮ ವೇಗಿ, ಸ್ವಿಂಗ್‌ ಹಾಗೂ ಆಕ್ರಮಣದ ಮೂಲಕ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಯಾವುದೇ ಸಮಯದಲ್ಲಿ ಇವರು ಕೆಡವಬಲ್ಲರು. ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಬೇಕೆಂದರೆ, ಇವರ ಪಾತ್ರ ತುಂಬಾ ಮುಖ್ಯ.

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪರ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿರುವ ಆಡಂ ಝಾಂಪ ಹಾಗೂ ಅಷ್ಟನ್ ಎಗರ್‌ ಅವರು ಕೂಡ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್‌ಗಳನ್ನು ಪಡೆಯುವುದು ಇವರ ಕಾಯಕವಾಗಿದೆ.

2023ರ ಐಸಿಸಿ ಒಡಿಐ ವಿಶ್ವಕಪ್, ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗಳಿಗೆ ಆಸ್ಟ್ರೇಲಿಯಾ ತಂಡ

ಆಸ್ಟ್ರೇಲಿಯಾ: ಪ್ಯಾಟ್‌ ಕಮಿನ್ಸ್ (ನಾಯಕ), ಅಷ್ಟನ್‌ ಎಗರ್‌, ಅಲೆಕ್ಸ್ ಕೇರಿ (ವಿ.ಕೀ), ನೇಥನ್‌ ಎಲ್ಲಿಸ್‌, ಕ್ಯಾಮೆರಾನ್‌ ಗ್ರೀನ್, ಆರೋನ್ ಹಾರ್ಡಿ, ಜಾಶ್‌ ಹೇಝಲ್‌ವುಡ್‌, ಟ್ರಾವಿಸ್‌ ಹೆಡ್‌, ಜಾಶ್‌ ಇಂಗ್ಲಿಸ್‌, ಮಿಚೆಲ್‌ ಮಾರ್ಷ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ತನ್ವೀರ್‌ ಸಂಘ, ಸ್ಟೀವನ್‌ ಸ್ಮಿತ್‌, ಮಿಚೆಲ್‌ ಸ್ಡಾರ್ಕ್‌, ಮಾರ್ಕಸ್‌ ಸ್ಟೋಯ್ನಿಸ್‌, ಡೇವಿಡ್‌ ವಾರ್ನರ್‌, ಆಡಂ ಝಾಂಪ

ಸೆಪ್ಟಂಬರ್‌ 7 ರಿಂದ 27ರವರೆಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಆಸ್ಟ್ರೇಲಿಯಾ ತಂಡ ಏಕದಿನ ಸರಣಿಗಳನ್ನು ಆಡಲಿದೆ. ಇದಾದ ಬಳಿಕ ಅಕ್ಟೋಬರ್‌ ಹಾಗೂ ನವೆಂಬರ್‌ ಅವಧಿಯಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ಆಡಲಿದೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago