ಕ್ರೀಡೆ

ಏಕದಿನ ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಮಾರ್ನಸ್‌ ಲಾಬುಶೇನ್‌ಗಿಲ್ಲ ತಂಡದಲ್ಲಿ ಸ್ಥಾನ.!

ಮೆಲ್ಬೋರ್ನ್‌: ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಹಾಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಒಟಿಐ ಸರಣಿಗಳಿಗೆ 18 ಸದಸ್ಯರ ಆಸ್ಟ್ರೇಲಿಯಾ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಎಂದಿನಂತೆ ವೇಗಿ ಪ್ಯಾಟ್‌ ಕಮಿನ್ಸ್ ಅವರು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.

ಕಳೆದ ಹಲವು ದಿನಗಳಿಂದ ಫಾರ್ಮ್‌ ಕಳೆದುಕೊಂಡಿರುವ ಪ್ರೀಮಿಯರ್‌ ಬ್ಯಾಟ್ಸ್‌ಮನ್‌ ಲಾಬುಶೇನ್‌ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್‌ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಏಕದಿನ ವಿಶ್ವಕಪ್‌ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡ, ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಎರಡು ಏಕದಿನ ಸರಣಿಗಳನ್ನು ಆಡಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು 18 ರಿಂದ 15ಕ್ಕೆ ಇಳಿಸಲಾಗುತ್ತದೆ.

https://twitter.com/CricketAus/status/1688384862028521472?s=20

ಟಿ20 ವಿಶ್ವಕಪ್‌ ಹಾಗೂ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಗೆದ್ದು ಬೀಗುತ್ತಿರುವ ಆಸ್ಟ್ರೇಲಿಯಾ ತಂಡ, ಮತ್ತೊಂದು ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಗೆಲ್ಲಲು ಎದುರು ನೋಡುತ್ತಿದೆ. ಹಾಗಾಗಿ ಪ್ಯಾಟ್‌ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡದಲ್ಲಿ ಅನುಭವಿಗಳ ಜೊತೆಗೆ ಕಿರಿಯ ಪ್ರತಿಭಾವಂತ ಆಟಗಾರರಿಗೂ ಅವಕಾಶ ನೀಡಲಾಗಿದೆ.

ಆಸ್ಟ್ರೇಲಿಯಾ ಬ್ಯಾಟಿಂಗ್ ವಿಭಾಗದಲ್ಲಿ ಡೇವಿಡ್‌ ವಾರ್ನರ್‌, ಸ್ಟೀವನ್ ಸ್ಮಿತ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್ ಕಾಣಿಸಿಕೊಂಡಿದ್ದಾರೆ. ಯಾವುದೇ ಒತ್ತಡದ ಸಂದರ್ಭದಲ್ಲಿ ರನ್‌ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಇವರು ಗೆಲುವಿನ ದಡ ಸೇರಿಸಬಲ್ಲರು. ಇನ್ನು ಆಲ್‌ರೌಂಡರ್‌ಗಳಾಗಿ ಮಿಚೆಲ್‌ ಮಾರ್ಷ್‌, ಮಾರ್ಕಸ್‌ ಸ್ಟೋಯ್ನಿಸ್‌, ಗ್ಲೆನ್ ಮ್ಯಾಕ್ಸ್‌ವೆಲ್ ಆಯ್ಕೆಯಾಗಿದ್ದಾರೆ.

ಇನ್ನು ವೇಗದ ಬೌಲಿಂಗ್‌ ವಿಭಾಗದಲ್ಲಿ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಹಾಗೂ ಜಾಶ್‌ ಹೇಝಲ್‌ವುಡ್‌ ಸ್ಥಾನ ಪಡೆದಿದ್ದಾರೆ. ತಮ್ಮ ವೇಗಿ, ಸ್ವಿಂಗ್‌ ಹಾಗೂ ಆಕ್ರಮಣದ ಮೂಲಕ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಯಾವುದೇ ಸಮಯದಲ್ಲಿ ಇವರು ಕೆಡವಬಲ್ಲರು. ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಬೇಕೆಂದರೆ, ಇವರ ಪಾತ್ರ ತುಂಬಾ ಮುಖ್ಯ.

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪರ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿರುವ ಆಡಂ ಝಾಂಪ ಹಾಗೂ ಅಷ್ಟನ್ ಎಗರ್‌ ಅವರು ಕೂಡ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್‌ಗಳನ್ನು ಪಡೆಯುವುದು ಇವರ ಕಾಯಕವಾಗಿದೆ.

2023ರ ಐಸಿಸಿ ಒಡಿಐ ವಿಶ್ವಕಪ್, ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗಳಿಗೆ ಆಸ್ಟ್ರೇಲಿಯಾ ತಂಡ

ಆಸ್ಟ್ರೇಲಿಯಾ: ಪ್ಯಾಟ್‌ ಕಮಿನ್ಸ್ (ನಾಯಕ), ಅಷ್ಟನ್‌ ಎಗರ್‌, ಅಲೆಕ್ಸ್ ಕೇರಿ (ವಿ.ಕೀ), ನೇಥನ್‌ ಎಲ್ಲಿಸ್‌, ಕ್ಯಾಮೆರಾನ್‌ ಗ್ರೀನ್, ಆರೋನ್ ಹಾರ್ಡಿ, ಜಾಶ್‌ ಹೇಝಲ್‌ವುಡ್‌, ಟ್ರಾವಿಸ್‌ ಹೆಡ್‌, ಜಾಶ್‌ ಇಂಗ್ಲಿಸ್‌, ಮಿಚೆಲ್‌ ಮಾರ್ಷ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ತನ್ವೀರ್‌ ಸಂಘ, ಸ್ಟೀವನ್‌ ಸ್ಮಿತ್‌, ಮಿಚೆಲ್‌ ಸ್ಡಾರ್ಕ್‌, ಮಾರ್ಕಸ್‌ ಸ್ಟೋಯ್ನಿಸ್‌, ಡೇವಿಡ್‌ ವಾರ್ನರ್‌, ಆಡಂ ಝಾಂಪ

ಸೆಪ್ಟಂಬರ್‌ 7 ರಿಂದ 27ರವರೆಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಆಸ್ಟ್ರೇಲಿಯಾ ತಂಡ ಏಕದಿನ ಸರಣಿಗಳನ್ನು ಆಡಲಿದೆ. ಇದಾದ ಬಳಿಕ ಅಕ್ಟೋಬರ್‌ ಹಾಗೂ ನವೆಂಬರ್‌ ಅವಧಿಯಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ಆಡಲಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago