ಕ್ರೀಡೆ

ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಜಯ: ಭಾರತಕ್ಕೆ ಸರಣಿ ವಶ

ರಾಜ್‌ಕೋಟ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂಚೇತರಿಕೆ ಪ್ರದರ್ಶನ ನೀಡಿದ ಆಸ್ಪ್ರೇಲಿಯಾ ತಂಡ 3ನೇ ಏಕದಿನ ಪಂದ್ಯದಲ್ಲಿಆತಿಥೇಯ ಭಾರತ ತಂಡವನ್ನು ಸೋಲಿಸಿ, ವೈಟ್‌ವಾಷ್‌ ಮುಖಭಂಗದಿಂದ ಪಾರಾಯಿತು.

ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿಬುಧವಾರ ನಡೆದ ಪಂದ್ಯದಲ್ಲಿ352 ರನ್‌ ಬೆನ್ನಟ್ಟಿದ ಭಾರತ ತಂಡವನ್ನು 2 ಎಸೆತಗಳು ಬಾಕಿ ಇರುವಂತೆಯೇ 286 ರನ್‌ಗಳಿಗೆ ಕಟ್ಟಿಹಾಕಿದ ಕಾಂಗರೂ ಬಳಗ 66 ರನ್‌ಗಳ ಅಂತರದಿಂದ ಗೆದ್ದು ವಿಜಯೋತ್ಸವ ಆಚರಿಸಿತು.

ಮೊದಲೆರಡು ಪಂದ್ಯಗಳಲ್ಲಿಜಯ ಗಳಿಸಿದ್ದ ಟೀಮ್‌ ಇಂಡಿಯಾ, 2-1 ಅಂತರದಲ್ಲಿಏಕದಿನ ಸರಣಿ ಗೆದ್ದುಕೊಂಡಿತು. ಇದರೊಂದಿಗೆ ಅಕ್ಟೋಬರ್‌ 5ರಂದು ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೂ ಸಜ್ಜುಗೊಂಡಿದೆ.

ಪ್ರಮುಖ ಆಟಗಾರರ ಗೈರು ಹಾಜರಾತಿಯಲ್ಲಿಯೂ ಮೊದಲೆರಡು ಪಂದ್ಯಗಳಲ್ಲಿ ವಿಜೃಂಭಿಸಿದ್ದ ಭಾರತ, ಪೂರ್ಣ ಸದಸ್ಯರ ಲಭ್ಯತೆಯ ಹೊರತಾಗಿಯೂ ಕೆಳ ಕ್ರಮಾಂಕದ ಬ್ಯಾಟಿಂಗ್‌ ವೈಫಲ್ಯದಿಂದಾಗಿ ಸೋಲನುಭವಿಸಿತು. ರೋಹಿತ್‌ (81), ವಿರಾಟ್‌ ಕೊಹ್ಲಿ(56) ಮತ್ತು ಶ್ರೇಯಸ್‌ (48) ಭಾರತದ ಪರ ಉತ್ತಮ ಪ್ರದರ್ಶನ ನೀಡಿದರು. 10 ಓವರ್‌ಗಳಲ್ಲಿ40 ರನ್‌ ವೆಚ್ಚದಲ್ಲಿ4 ವಿಕೆಟ್‌ ಉರುಳಿಸಿದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಆಸೀಸ್‌ ಜಯದಲ್ಲಿಮುಖ್ಯ ಭೂಮಿಕೆ ವಹಿಸಿದರು.

ಅಗ್ರ ಕ್ರಮಾಂಕದ ನಾಲ್ವರು ಬ್ಯಾಟರ್‌ಗಳ ಅರ್ಧ ಶತಕಗಳ ಸಾಹಸದಿಂದ ಆಸ್ಪ್ರೇಲಿಯಾ ತಂಡ 352 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು. ಮೊದಲೆರಡು ಸೋಲುಗಳಿಂದ ಹೊರಬರುವ ಒತ್ತಡದಲ್ಲಿಕಣಕ್ಕಿಳಿದ ಪ್ರವಾಸಿ ತಂಡದ ಪರ ಇನಿಂಗ್ಸ್‌ ಆರಂಭಿಸಿದ ಡೇವಿಡ್‌ ವಾರ್ನರ್‌ ಮತ್ತು ಮಿಚೆಲ್‌ ಮಾಷ್‌ರ್‍, 78 ರನ್‌ಗಳ ಪಾಲುದಾರಿಕೆ ಆಟ ಪ್ರದರ್ಶಿಸಿ ತಂಡದ ಬೃಹತ್‌ ಮೊತ್ತಕ್ಕೆ ವೇದಿಕೆ ನಿರ್ಮಿಸಿದರು. ಸ್ಫೋಟಕ ಬ್ಯಾಟಿಂಗ್‌ ನಡೆಸಿದ ವಾರ್ನರ್‌, ಕೇವಲ 34 ಎಸೆತಗಳಲ್ಲಿ6 ಫೋರ್‌, 4 ಸಿಕ್ಸರ್‌ ಒಳಗೊಂಡ 56 ರನ್‌ ಸಿಡಿಸಿ ಪ್ರಸಿದ್ಧ್‌ ಕೃಷ್ಣಾಗೆ ವಿಕೆಟ್‌ ಒಪ್ಪಿಸಿದರು.

ನಂತರ 2ನೇ ವಿಕೆಟ್‌ಗೆ ಜತೆಗೂಡಿದ ಮಿಚೆಲ್‌ ಮತ್ತು ಸ್ಮಿತ್‌ ಜೋಡಿ, ಆತಿಥೇಯ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡುವುದರೊಂದಿಗೆ 137 ರನ್‌ಗಳ ಜತೆಯಾಟ ನಿರ್ವಹಿಸಿತು. ಮಾಷ್‌ರ್‍ 4 ರನ್‌ಗಳ ಕೊರತೆಯಿಂದ ಶತಕ ವಂಚಿತರಾದರೆ, ಸ್ಮಿತ್‌ 74 ರನ್‌ ಕೊಡುಗೆ ನೀಡಿದರು. ಇವರು ಹಾಕಿಕೊಟ್ಟ ಬುನಾದಿ ಮೇಲೆ ಇನಿಂಗ್ಸ್‌ ಕಟ್ಟಿದ ಲ್ಯಾಬುಶೇನ್‌ ಕೇವಲ 58 ಎಸೆತಗಳಲ್ಲಿ72 ರನ್‌ ಸಿಡಿಸಿ ತಂಡದ ಬೃಹತ್‌ ಮೊತ್ತಕ್ಕೆ ನೆರವಾದರು. ಭಾರತದ ಪರ ಬುಮ್ರಾ 3 ವಿಕೆಟ್‌ ಉರುಳಿಸಿದರೆ,ಕುಲ್ದೀಪ್‌ 2 ವಿಕೆಟ್‌ ತಮ್ಮದಾಗಿಸಿಕೊಂಡರು.

3ನೇ ಒಡಿಐ ಪಂದ್ಯದ ಸಂಕ್ಷಿಪ್ತ ಸ್ಕೋರ್‌:

ಆಸ್ಪ್ರೇಲಿಯಾ: 50 ಓವರ್‌ಗಳಲ್ಲಿ7 ವಿಕೆಟ್‌ಗೆ 352 (ಮಿಚೆಲ್‌ ಮಾರ್ಷ್‌ 96, ಡೇವಿಡ್‌ ವಾರ್ನರ್‌ 56, ಸ್ಟೀವನ್‌ ಸ್ಮಿತ್‌ 74, ಮರ್ನಾಸ್‌ ಲಾಬುಶೇನ್‌ 72; ಜಸ್‌ಪ್ರೀತ್‌ ಬುಮ್ರಾ 81ಕ್ಕೆ 3, ಕುಲ್ದೀಪ್‌ ಯಾದವ್‌ 48ಕ್ಕೆ 2).

ಭಾರತ: 49.4 ಓವರ್‌ಗಳಲ್ಲಿ 286 ರನ್‌ಗಳಿಗೆ ಆಲ್‌ಔಟ್‌ (ರೋಹಿತ್‌ ಶರ್ಮಾ 81, ವಿರಾಟ್‌ ಕೊಹ್ಲಿ56, ಶ್ರೇಯರ್‌ ಅಯ್ಯರ್‌ 48; ಗ್ಲೆನ್‌ ಮ್ಯಾಕ್ಸ್‌ವೆಲ್‌ 38ಕ್ಕೆ 4, ಜಾಶ್‌ ಹೇಝಲ್‌ವುಡ್‌ 42ಕ್ಕೆ 2).

ಪಂದ್ಯಶ್ರೇಷ್ಠ: ಗ್ಲೆನ್‌ ಮ್ಯಾಕ್ಸ್‌ವೆಲ್‌

ಸರಣಿ ಶ್ರೇಷ್ಠ: ಶುಭ್‌ಮನ್‌ ಗಿಲ್‌

andolanait

Recent Posts

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

8 mins ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

1 hour ago

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

2 hours ago

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

5 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

5 hours ago