ಕ್ರೀಡೆ

Australian Open 2024: ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಕನ್ನಡಿಗ ಬೋಪಣ್ಣ!

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶನಿವಾರ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಸ್ಸೋರಿ ಜೋಡಿಯನ್ನು ಮಣಿಸಿದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿಯು ಆಸ್ಟ್ರೇಲಿಯನ್ ಓಪನ್ ಡಬಲ್ಸ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

1 ಗಂಟೆ 39 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಟಲಿ ಜೋಡಿಯು ವಿರುದ್ಧ ಭಾರತ ಮತ್ತು ಆಸ್ಟ್ರೇಲಿಯಾ ಜೋಡಿಯು 7-6 (0), 7-5 ಅಂತರದಲ್ಲಿ ಜಯ ದಾಖಲಿಸಿತು.

ಫೈನಲ್‌ ತಲುಪಲು ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜೊತೆಗಾರ ಎಬ್ಡೆನ್, ಚೀನಾದ ಜಾಂಗ್ ಝಿಜೆನ್ ಮತ್ತು ಜೆಕ್ ಗಣರಾಜ್ಯದ ತೋಮಸ್ ಮಚಾಕ್ ಜೋಡಿಯನ್ನು ಕೇವಲ ಎರಡು ಗಂಟೆಗಳಲ್ಲಿ 6-3, 3-6, 7-6 ಅಂತರದಲ್ಲಿ ಮಣಿಸಿದ್ದರು.

43 ವಯಸ್ಸಿನ ಬೋಪಣ್ಣ ಪುರುಷರ ಟೆನಿಸ್‌ನಲ್ಲಿ ಹಿರಿಯ ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್ ಆದರು. ಅವರು ಜೀನ್-ಜೂಲಿಯನ್ ರೋಜರ್ ಅವರ ದಾಖಲೆ ಮುರಿದಿದ್ದಾರೆ. ರೋಜರ್‌ ತಮ್ಮ 40 ನೇ ವಯಸ್ಸಿನಲ್ಲಿ 2022 ರಲ್ಲಿ ಮಾರ್ಸೆಲೊ ಅರೆವೊಲಾ ಅವರೊಂದಿಗೆ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಟ್ರೋಫಿ ಗೆದ್ದಿದ್ದರು.

https://x.com/AustralianOpen/status/1751226766331683233?s=20

andolanait

Recent Posts

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

31 mins ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

2 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

2 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

5 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

5 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

5 hours ago