ಕ್ರೀಡೆ

Australian Open 2024: ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಕನ್ನಡಿಗ ಬೋಪಣ್ಣ!

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶನಿವಾರ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಸ್ಸೋರಿ ಜೋಡಿಯನ್ನು ಮಣಿಸಿದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿಯು ಆಸ್ಟ್ರೇಲಿಯನ್ ಓಪನ್ ಡಬಲ್ಸ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

1 ಗಂಟೆ 39 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಟಲಿ ಜೋಡಿಯು ವಿರುದ್ಧ ಭಾರತ ಮತ್ತು ಆಸ್ಟ್ರೇಲಿಯಾ ಜೋಡಿಯು 7-6 (0), 7-5 ಅಂತರದಲ್ಲಿ ಜಯ ದಾಖಲಿಸಿತು.

ಫೈನಲ್‌ ತಲುಪಲು ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜೊತೆಗಾರ ಎಬ್ಡೆನ್, ಚೀನಾದ ಜಾಂಗ್ ಝಿಜೆನ್ ಮತ್ತು ಜೆಕ್ ಗಣರಾಜ್ಯದ ತೋಮಸ್ ಮಚಾಕ್ ಜೋಡಿಯನ್ನು ಕೇವಲ ಎರಡು ಗಂಟೆಗಳಲ್ಲಿ 6-3, 3-6, 7-6 ಅಂತರದಲ್ಲಿ ಮಣಿಸಿದ್ದರು.

43 ವಯಸ್ಸಿನ ಬೋಪಣ್ಣ ಪುರುಷರ ಟೆನಿಸ್‌ನಲ್ಲಿ ಹಿರಿಯ ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್ ಆದರು. ಅವರು ಜೀನ್-ಜೂಲಿಯನ್ ರೋಜರ್ ಅವರ ದಾಖಲೆ ಮುರಿದಿದ್ದಾರೆ. ರೋಜರ್‌ ತಮ್ಮ 40 ನೇ ವಯಸ್ಸಿನಲ್ಲಿ 2022 ರಲ್ಲಿ ಮಾರ್ಸೆಲೊ ಅರೆವೊಲಾ ಅವರೊಂದಿಗೆ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಟ್ರೋಫಿ ಗೆದ್ದಿದ್ದರು.

https://x.com/AustralianOpen/status/1751226766331683233?s=20

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

7 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

7 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

7 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

7 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

8 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

8 hours ago