ಕ್ರೀಡೆ

Australian Open 2024: ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಕನ್ನಡಿಗ ಬೋಪಣ್ಣ!

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶನಿವಾರ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಸ್ಸೋರಿ ಜೋಡಿಯನ್ನು ಮಣಿಸಿದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿಯು ಆಸ್ಟ್ರೇಲಿಯನ್ ಓಪನ್ ಡಬಲ್ಸ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

1 ಗಂಟೆ 39 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಟಲಿ ಜೋಡಿಯು ವಿರುದ್ಧ ಭಾರತ ಮತ್ತು ಆಸ್ಟ್ರೇಲಿಯಾ ಜೋಡಿಯು 7-6 (0), 7-5 ಅಂತರದಲ್ಲಿ ಜಯ ದಾಖಲಿಸಿತು.

ಫೈನಲ್‌ ತಲುಪಲು ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜೊತೆಗಾರ ಎಬ್ಡೆನ್, ಚೀನಾದ ಜಾಂಗ್ ಝಿಜೆನ್ ಮತ್ತು ಜೆಕ್ ಗಣರಾಜ್ಯದ ತೋಮಸ್ ಮಚಾಕ್ ಜೋಡಿಯನ್ನು ಕೇವಲ ಎರಡು ಗಂಟೆಗಳಲ್ಲಿ 6-3, 3-6, 7-6 ಅಂತರದಲ್ಲಿ ಮಣಿಸಿದ್ದರು.

43 ವಯಸ್ಸಿನ ಬೋಪಣ್ಣ ಪುರುಷರ ಟೆನಿಸ್‌ನಲ್ಲಿ ಹಿರಿಯ ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್ ಆದರು. ಅವರು ಜೀನ್-ಜೂಲಿಯನ್ ರೋಜರ್ ಅವರ ದಾಖಲೆ ಮುರಿದಿದ್ದಾರೆ. ರೋಜರ್‌ ತಮ್ಮ 40 ನೇ ವಯಸ್ಸಿನಲ್ಲಿ 2022 ರಲ್ಲಿ ಮಾರ್ಸೆಲೊ ಅರೆವೊಲಾ ಅವರೊಂದಿಗೆ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಟ್ರೋಫಿ ಗೆದ್ದಿದ್ದರು.

https://x.com/AustralianOpen/status/1751226766331683233?s=20

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

1 hour ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago