ಕ್ರೀಡೆ

Australian Open 2024: ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಕನ್ನಡಿಗ ಬೋಪಣ್ಣ!

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶನಿವಾರ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಸ್ಸೋರಿ ಜೋಡಿಯನ್ನು ಮಣಿಸಿದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿಯು ಆಸ್ಟ್ರೇಲಿಯನ್ ಓಪನ್ ಡಬಲ್ಸ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

1 ಗಂಟೆ 39 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಟಲಿ ಜೋಡಿಯು ವಿರುದ್ಧ ಭಾರತ ಮತ್ತು ಆಸ್ಟ್ರೇಲಿಯಾ ಜೋಡಿಯು 7-6 (0), 7-5 ಅಂತರದಲ್ಲಿ ಜಯ ದಾಖಲಿಸಿತು.

ಫೈನಲ್‌ ತಲುಪಲು ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜೊತೆಗಾರ ಎಬ್ಡೆನ್, ಚೀನಾದ ಜಾಂಗ್ ಝಿಜೆನ್ ಮತ್ತು ಜೆಕ್ ಗಣರಾಜ್ಯದ ತೋಮಸ್ ಮಚಾಕ್ ಜೋಡಿಯನ್ನು ಕೇವಲ ಎರಡು ಗಂಟೆಗಳಲ್ಲಿ 6-3, 3-6, 7-6 ಅಂತರದಲ್ಲಿ ಮಣಿಸಿದ್ದರು.

43 ವಯಸ್ಸಿನ ಬೋಪಣ್ಣ ಪುರುಷರ ಟೆನಿಸ್‌ನಲ್ಲಿ ಹಿರಿಯ ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್ ಆದರು. ಅವರು ಜೀನ್-ಜೂಲಿಯನ್ ರೋಜರ್ ಅವರ ದಾಖಲೆ ಮುರಿದಿದ್ದಾರೆ. ರೋಜರ್‌ ತಮ್ಮ 40 ನೇ ವಯಸ್ಸಿನಲ್ಲಿ 2022 ರಲ್ಲಿ ಮಾರ್ಸೆಲೊ ಅರೆವೊಲಾ ಅವರೊಂದಿಗೆ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಟ್ರೋಫಿ ಗೆದ್ದಿದ್ದರು.

https://x.com/AustralianOpen/status/1751226766331683233?s=20

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago