ಕ್ರೀಡೆ

Australian Open Badminton 2025 : ಲಕ್ಷ್ಯ ಸೇನ್‌ಗೆ ಚಿನ್ನದ ಪದಕ

ಸಿಡ್ನಿ : ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಆಸ್ಟ್ರೇಲಿಯನ್ ಓಪನ್ 2025 ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ನ. 23 ರಂದು ಸಿಡ್ನಿಯ ಸ್ಟೇಟ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಸೂಪರ್ 500 ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವದ 14ನೇ ಶ್ರೇಯಾಂಕಿತ ಆಟಗಾರ ಜಪಾನ್‌ನ ಯುಶಿ ತನಕಾ ಅವರನ್ನು 21-15, 21-11 ನೇರ ಸೆಟ್‌ಗಳಿಂದ ಸೋಲಿಸಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದನ್ನು ಓದಿ: ತಂದೆಗೆ ಹೃದಯಾಘಾತ : ಇಂದು ನಡೆಯೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

ಸೆಮಿಫೈನಲ್ ಪಂದ್ಯದಲ್ಲಿಎರಡನೇ ಶ್ರೇಯಾಂಕದ ತೈವಾನ್ನ ಚೌ ಟಿಯೆನ್ ಚೆನ್ ವಿರುದ್ಧ ಗೆಲ್ಲಲು ಲಕ್ಷ್ಯ ಸೇನ್ ಬರೋಬ್ಬರಿ 86 ನಿಮಿಷಗಳನ್ನು ತೆಗೆದುಕೊಂಡಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಉತ್ತಮ ಲಯ ಪ್ರದರ್ಶಿಸಿದ ಲಕ್ಷ್ಯ , ಯುಶಿ ತನಕಾ ಅವರನ್ನು ಕೇವಲ 38 ನಿಮಿಷಗಳಲ್ಲಿ ಮಣಿಸಿದರು.

ಈ ಗೆಲುವಿನೊಂದಿಗೆ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ಎರಡನೇ ಭಾರತೀಯ ಪುರುಷ ಆಟಗಾರ ಎಂಬ ಹೆಗ್ಗಳಿಕೆಯನ್ನು ಲಕ್ಷ್ಯ ಸೇನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ 2017 ರಲ್ಲಿ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದಿದ್ದರು. ಇದೀಗ 24ನೇ ವಯಸ್ಸಿನಲ್ಲೇ ಆಸ್ಟ್ರೇಲಿಯನ್ ಓಪನ್‌ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡುವ ಮೂಲಕ ಲಕ್ಷ್ಯ ಸೇನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

26 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

51 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

55 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago